ಗೋವಾ (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ನ ಮಾಜಿ ಶಾಸಕ ದಿಗಂಬರ್ ಕಾಮತ್ ಅವರಿಗೆ ಬಿಜೆಪಿ ಸೇರಲು ದೇವರು ಹೇಳಿದ್ದಂತೆ. ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ ಅವರು, “ನಾನು ದೇವಸ್ಥಾನಕ್ಕೆ ಹೋಗಿದ್ದೆ, ಮತ್ತು ದೇವರಲ್ಲಿ ಕೇಳಿದೆ, ಬಿಜೆಪಿ ಸೇರುವುದು ನನ್ನ ಮನಸ್ಸಿನಲ್ಲಿದೆ, ನಾನೇನು ಮಾಡಬೇಕು?, ದೇವರು ನೀನು ಚಿಂತಿಸಬೇಡ ಮುಂದೆ ಹೋಗು ಎಂದು ಹೇಳಿದರು ಎಂದು ಹೇಳುತ್ತಾರೆ.
ಬುಧವಾರ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರು. ಕಾಮತ್ ಅವರೊಂದಿಗೆ ಮೈಕೆಲ್ ಲೋಬೋ, ದೇಲಿಲಾ ಲೋಬೋ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ರಾಜೇಶ್ ಫಲ್ದೇಸಾಯಿ, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಕೂಡ ಗೋವಾ ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.