ಬೆಳಗಾವಿ (ವಿಶ್ವ ಕನ್ನಡಿಗ ನ್ಯೂಸ್) : ಮನೆಯ ಮೇಲಿನ ಮಹಡಿಯಲ್ಲಿ ಹೂ ಕೀಳಲು ಹೋಗಿ ಆಯತಪ್ಪಿ ನೆಲಕ್ಕೆ ಬಿದ್ದು ಮೃತಪಟ್ಟ ಹಿಂದೂ ಧರ್ಮದ ಬಾಲಕಿಯ ಅಂತ್ಯಕ್ರಿಯೆಯನ್ನು ಮುಸ್ಲಿಮರು ನೆರವೇರಿಸಿದ್ದಾರೆ. ಉಡುಪಿ ಮೂಲದ ಬೆಳಗಾವಿಯ ವೀರಭದ್ರೇಶ್ವರ ನಗರದಲ್ಲಿ ವಾಸವಾಗಿದ್ದ ವಿದ್ಯಾಶ್ರೀ ಹೆಗಡೆ (10) ಮೃತಪಟ್ಟ ಬಾಲಕಿಯಾಗಿದ್ದಾಳೆ.
ವಿದ್ಯಾಶ್ರೀ ಹೆಗಡೆ ನಿನ್ನೆ ಬೆಳಗ್ಗೆ ಮನೆಯ ಮಹಡಿ ಮೇಲೆ ಹತ್ತಿ ಹೂವು ಕೀಳಲು ಹೋದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಕೂಡಲೇ ಬಾಲಕಿಯನ್ನು ಸ್ಥಳೀಯ ಮುಸ್ಲಿಂ ಸಮುದಾಯದವರು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ಸೇರಿದ್ದರು. ಆದರೆ ಆಕೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಳು.
ಬೆಳಗಾವಿಯಲ್ಲಿ ಬಾಲಕಿ ತನ್ನ ತಾಯಿ ಜತೆಗೆ ವಾಸವಾಗಿದ್ದಳು. ಆಸ್ಪತ್ರೆ ವೆಚ್ಛ ಭರಿಸಲು ತಾಯಿಗೆ ಸಾಧ್ಯವಾಗದ ಕಾರಣ, ವೀರಭದ್ರೇಶ್ವರ ನಗರದ ಕೆಲ ಮುಸ್ಲಿಂ ಮುಖಂಡರೇ ವೆಚ್ಚ ಭರಿಸಿದರು. ನಂತರ ಬಾಲಕಿ ಶವವನ್ನು ಮನೆಗೆ ತ೦ದು, ಅಂತ್ಯಸಂಸ್ಕಾರಕ್ಕೂ ವ್ಯವಸ್ಥೆ ಮಾಡಿ ಸದಾಶಿವ ನಗರದಲ್ಲಿರುವ ಸ್ಮಶಾನ ಭೂಮಿಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಬಾಲಕಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಹಿಂದೂ ಮುಸ್ಲಿಂ ಎಂಬ ಕೋಮು ಬೀಜ ಬಿತ್ತುವವರ ಮಧ್ಯೆ ಈ ರೀತಿಯ ಮಾನವೀಯತೆಯ ಕಾರ್ಯಗಳಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.