ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಂತೂರು ಪದವು ಬಳಿಯ ನಿಟ್ಟೆ ಪಿಯು ಕಾಲೇಜಿನ ಪ್ರಥಮ ಪಿಯುನಲ್ಲಿ ವ್ಯಾಸಾಂಗ ಮಾಡುತ್ತಿರುವ 17 ವರ್ಷದ ವಿದ್ಯಾರ್ಥಿಗೆ ಪದವು ಪಿಯು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಬ್ಬರು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಪದುವಾ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಅದೇ ಕಾಲೇಜಿನ ವಿದ್ಯಾರ್ಥಿಗೆ ಬೆದರಿಕೆ ಹಾಕಿತ್ತು. ಈ ವಿಚಾರವಾಗಿ ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿ ತನ್ನ ಗೆಳೆಯರೊಂದಿಗೆ ಸಮಾಧಾನ ಮಾಡಲು ಅಲ್ಲಿಗೆ ಹೋಗಿದ್ದನು. ಈ ವಿಚಾರವಾಗಿ ಕೋಪಗೊಂಡ ಆರೋಪಿತ ವಿದ್ಯಾರ್ಥಿಗಳು ಆತನನ್ನು ನಂತೂರು ಜಂಕ್ಷನ್ ಬಳಿಯಿರುವ ದೇವಸ್ಥಾನದ ಹಿಂಬದಿಗೆ ಕರೆದೊಯ್ದು ಚೂರಿಯಿಂದ ಇರಿದಿದ್ದಾರೆ.
ಪರಿಣಾಮ ತೀವ್ರ ರಕ್ತಸ್ರಾವವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿರುವ ಪಿಯುಸಿ ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಠಾಣೆಗೆ ಕರೆಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.