ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ಮಧ್ಯಸ್ಥರು ಅನೇಕ ಪ್ರಕರಣಗಳನ್ನು ರಾಜಿ ಮಾಡಿಸುವುದರಿಂದ ನ್ಯಾಯಾಲಯದ ಮತ್ತು ಪ್ರಕರಣದೊಳಗಿನ ವ್ಯಕ್ತಿಗಳ ಸಮಯ ಉಳಿಯುತ್ತದೆ. ಆದ್ದರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮಧ್ಯಸ್ಥಗಾರರಿಗೆ ಎರಡು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು , ಈ ಕಾರ್ಯಾಗಾರವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಆರ್ ನಾಗರಾಜ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು , ಬೆಂಗಳೂರು ಮಧ್ಯಸ್ಥಿಕಾ ಕೇಂದ್ರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಕೋಲಾರ ಇವರುಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮಧ್ಯಸ್ಥಗಾರರಿಗೆ ಎರಡು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ನ್ಯಾಯ ದೊರಕಬೇಕು. ಮಧ್ಯಸ್ಥಿಕೆದಾರರು ಹೇಳುವ ಕಾರಣಗಳಿಂದ ಪ್ರಕರಣದೊಳಗಿನ ವ್ಯಕ್ತಿಗಳು ರಾಜಿಯಾಗುವಂತೆ ಕಾರ್ಯನಿರ್ವಹಿಸಬೇಕು . ಯಾವುದೇ ಕೆಲಸವನ್ನು ಕೈಗೊಂಡರೆ ನಿಷ್ಠೆಯಿಂದ ಪೂರ್ಣಗೊಳಿಸಬೇಕು.
ಈ ಕಾರ್ಯಾಗಾರದಲ್ಲಿ ಜ್ಞಾನವನ್ನು ಪಡೆಯುವುದರಿಂದ ನಿಮ್ಮ ಕೆಲಸಗಳನ್ನು ಪೂರ್ಣಗೊಳಿಸಲು ಉಪಯೋಗವಾಗುತ್ತದೆ. ಗ್ರಾಮೀಣ ಭಾಗದ ಜನರಿಗೆ ಅವರದೇ ಆದ ಭಾಷೆಯಲ್ಲಿ ಸಂವಹನ ನಡೆಸಿ ಸಂಧಾನ ಮಾಡಿಸಬೇಕು . ಸಮಾಜಕ್ಕೆ ಮಧ್ಯಸ್ಥಿಕೆದಾರರ ಸೇವೆ ಬಹುಮುಖ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ . ಶ್ರೀಧರ್ ರವರು ಮಾತನಾಡಿ ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲು ಶಿಸ್ತು ಬಹುಮುಖ್ಯ ಅಂಶವಾಗಿರುತ್ತದೆ . ಯಾವುದೇ ಪ್ರಕರಣಗಳನ್ನು ಸಂಧಾನ ಮಾಡಿಸಲು ವಕೀಲರು ನೈಪುಣ್ಯತೆಯನ್ನು ಹೊಂದಿರಬೇಕು. ಜನರಿಗೆ ಸಮಾನತೆಯಿಂದ ಕೂಡಿದ ನ್ಯಾಯವನ್ನು ಒದಗಿಸಲು ವಕೀಲರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಬೆಂಗಳೂರು ಮಧ್ಯಸ್ಥಿಕ ಕೇಂದ್ರದ ತರಬೇತುದಾರರಾದ ಅನುರಾಧ.ಎಸ್.ಆರ್ . ಲತಾಪ್ರಸಾದ್ , ಮಂಜುಳ.ಎನ್.ತೇಜಸ್ವಿನಿ , ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ , ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುನಿಲ ಎಸ್ ಹೊಸಮನಿ , ಎರಡನೇ ಹೆಚ್ಚುವರಿ ಜಿಲ್ಲಾ ವ್ಯವಹಾರಿಕ ನ್ಯಾಯಾಧೀಶರಾದ ಬಾಲಚಂದ್ರ ಎನ್.ಭಟ್ , ವಕೀಲರಾದ ಧನರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.