ತಿರುಪತಿ(ವಿಶ್ವಕನ್ನಡಿಗ ನ್ಯೂಸ್): ಆಂಧ್ರಪ್ರದೇಶದಲ್ಲಿನ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಶುಕ್ರವಾರ ಭೇಟಿ ನೀಡಿದ್ದರು. ಅವರ ಜೊತೆಗೆ ಕಿರಿಯ ಪುತ್ರ ಅನಂತ್ ಅಂಬಾನಿಯವರ ಭಾವಿ ಪತ್ನಿ ರಾಧಿಕಾ ಮರ್ಚಂಟ್ ಕೂಡಾ ಇದ್ದರು.
ಶುಕ್ರವಾರ ಬೆಳಗ್ಗೆ ಅಭಿಷೇಕ ಹಾಗೂ ನಿಜಪಾದ ದರ್ಶನ ಸೇವೆಯನ್ನು ಅಂಬಾನಿ ಮಾಡಿದರು. ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಧರ್ಮ ರೆಡ್ಡಿಯವರು ಅಂಬಾನಿಯವರನ್ನು ಸ್ವಾಗತಿಸಿದರು ಹಾಗೂ ದರ್ಶನಕ್ಕೆ ವ್ಯವಸ್ಥೆ ಮಾಡಿದರು.
ದರ್ಶನದ ನಂತರ ರಂಗನಾಯಕ ಮಂಟಪದಲ್ಲಿ ವೇದಪಾರಂಗತರಿಂದ ವೇದಘೋಷ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖೇಶ್ ಅಂಬಾನಿ, ತಿರುಮಲಕ್ಕೆ ಭೇಟಿ ನೀಡುವುದು ಅತ್ಯಂತ ಖುಷಿಯ ಸಂಗತಿ. ತಿರುಮಲ ದೇವಸ್ಥಾನ ಪ್ರತಿ ವರ್ಷವೂ ಅಭಿವೃದ್ಧಿ ಹೊಂದುತ್ತಿದೆ. ಎಲ್ಲರಿಗೂ ಒಳ್ಳೆಯದು ಮಾಡು ಎಂದು ವೆಂಕಟೇಶ್ವರ ಸ್ವಾಮಿಯ ಬಳಿ ಬೇಡಿಕೊಂಡಿದ್ದೇನೆ ಎಂದು ಅವರು ಹೇಳಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.