ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) : 2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ( ಮುಸ್ಲಿಂ , ಕ್ರಿಶ್ಚಿಯನ್ , ಜೈನ್ , ಸಿಖ್ , ಬೌದ್ಧ ಮತ್ತು ಪಾರ್ಸಿ ) ಪ್ರತಿ ವಿದ್ಯಾರ್ಥಿಗಳಿಗೆ ಮಾಹೆಯಾನ ರೂ .1500 / -ರಂತೆ 10 ತಿಂಗಳಿಗೆ ರೂ .15000 / -ರೂಗಳನ್ನು ನೀಡಲಾಗುವುದು.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿದ್ದು , ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು. ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದವರಾಗಿರಬೇಕು.
ಒಂದೇ ನಗರದ ವ್ಯಾಪ್ತಿಯಲ್ಲಿ ಇರುವವರು ಅರ್ಹರಿರುವುದಿಲ್ಲ , ಕುಟುಂದ ವಾರ್ಷಿಕ ವರಮಾನ ಅಲ್ಪಸಂಖ್ಯಾತರ ಪ್ರವರ್ಗ -1 ಕ್ಕೆ ರೂ .2.50 ಲಕ್ಷಗಳು ಹಾಗೂ ಅಲ್ಪಸಂಖ್ಯಾತರ ಪ್ರವರ್ಗ -2 ಎ ರವರಿಗೆ ರೂ .2.00 ಲಕ್ಷಗಳು ಮೀರಿರಬಾರದು. ಹಿಂದಿನ ವರ್ಷದ ಪರೀಕ್ಷೆಗಳಲ್ಲಿ ಯಾವುದೇ ಬ್ಯಾಕ್ಲ್ಯಾಗ್ ಇರಬಾರದು.
2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಿ ಸ್ಥಳವಕಾಶವಿಲ್ಲದೇ ಬಾಕಿ ಇರುವ ಅರ್ಜಿಗಳಿಗೆ ಮೊದಲ ಅದ್ಯತೆ ನೀಡಿವುದು.
ಮುಂದುವರಿದು , ಅರ್ಹ ಅಲ್ಪಸಂಖ್ಯಾತರ ಸಮುದಾಯದ ( ಮುಸ್ಲಿಂ , ಕ್ರಿಶ್ಚಿಯನ್ , ಜೈನ್ , ಸಿಖ್ , ಬೌದ್ಧ ಮತ್ತು ಪಾರ್ಸಿ ) ವಿದ್ಯಾರ್ಥಿಗಳು ಅರ್ಜಿಗಳನ್ನು ಅಕ್ಟೋಬರ್ 20 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ , ಮೌಲಾನಾ ಆಜಾದ್ ಭವನ , ನೆಲ ಮಹಡಿ , ಶ್ರೀ ದೇವರಾಜ್ ಅರಸು ಬಡಾವಣೆ , 2 ನೇ ಬ್ಲಾಕ್ , ಟಮಕ ವಾರ್ಡ್ ನಂ .1 , ಕೋಲಾರ ದೂರವಾಣಿ ಸಂಖ್ಯೆ : 08152-295257 ಇಲ್ಲಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.