ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೆಹಲಿಯ ಸೀಮಾಪುರಿಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜನರ ಗುಂಪಿಗೆ ಟ್ರಕ್ ಹರಿದ ಹೊಡೆದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಅಪಘಾತ ಸಂಭವಿಸಿದ ನಂತರ ಗಂಭೀರವಾಗಿ ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸಿದಾಗ ಸಂತ್ರಸ್ತರು ರಸ್ತೆ ವಿಭಜಕದ ಬಳಿ ಮಲಗಿದ್ದರು. ವೇಗವಾಗಿ ಬಂದ ಟ್ರಕ್ ಅವರ ಮೇಲೆ ನುಗ್ಗಿತು. ದೆಹಲಿ ಸಾರಿಗೆ ನಿಗಮ (ಡಿಟಿಸಿ) ಬಸ್ ಡಿಪೋ ಬಳಿ ಈ ಘಟನೆ ನಡೆದಿದೆ. ಮೃತರನ್ನು ಕರೀಮ್ (52), ಛೋಟೆ ಖಾನ್ (25), ಷಾ ಆಲಂ (38) ಮತ್ತು ರಾಹು (45) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು 16 ವರ್ಷದ ಮನೀಶ್ ಮತ್ತು ಪ್ರದೀಪ್ ಎಂದು ಗುರುತಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.