ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ಪಾಪ್ಯುಲರ್ ಫ್ರಂಟ್ ಕರೆ ನೀಡಿದ್ದ ಹರತಾಳದ ಸಂದರ್ಭದಲ್ಲಿ ರಾಜ್ಯದಾದ್ಯಂತ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಮಾರು 220 ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಹಿಂಸಾಚಾರದ ಆರೋಪಿಗಳು ಮತ್ತು ಮುಂಜಾಗ್ರತೆಗಾಗಿ ವಶದಲ್ಲಿರುವವರು ಸೇರಿದ್ದಾರೆ.
ಪ್ರಾಥಮಿಕ ಅಂದಾಜಿನ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಹಿಂಸಾಚಾರದಿಂದಾಗಿ ಕೆಎಸ್ಆರ್ಟಿಸಿಗೆ 42 ಲಕ್ಷ ರೂ.ಗಳ ನಷ್ಟವಾಗಿದೆ. ಸುಮಾರು 70 ಬಸ್ ಗಳು ಹಾನಿಗೀಡಾಗಿವೆ. ಎಂಟು ಚಾಲಕರು, ಇಬ್ಬರು ಕಂಡಕ್ಟರ್ ಗಳು ಮತ್ತು ಒಬ್ಬ ಪ್ರಯಾಣಿಕ ಗಾಯಗೊಂಡಿದ್ದಾರೆ. ನಷ್ಟವಾದ ಮೊತ್ತವನ್ನು ತಪ್ಪಿತಸ್ಥರಿಂದ ಸಂಗ್ರಹಿಸಲಾಗುವುದು ಎಂದು ಸಾರಿಗೆ ಸಚಿವ ಆಂಟನಿ ರಾಜು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.