ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಕೆಪಿಸಿಸಿ ವಾರ್ ರೂಂ ಸದಸ್ಯರು ಮತ್ತು ಜಿಲ್ಲೆವಾರು ಸಂಯೋಜಕರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರ ಹಾಗೂ ಕೆಪಿಸಿಸಿ ಕೋ ಆರ್ಡಿನೇಟರ್ ಆಸಿಫ್ ಹಯಾತ್ ಹಾಗೂ ಸೈಯದ್ ಮುಖೀಮುದ್ದೀನ್ ಅವರನ್ನು ಕೆಪಿಸಿಸಿ ವಾರ್ರೂಂ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಅದರಲ್ಲದೆ ಜಿಲ್ಲೆಯವಾರು ವಾರ್ರೂಂ ಸದಸ್ಯರು ಮತ್ತು ಸಂಯೋಜಕರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕೆಪಿಸಿಸಿ ಉಪಾಧ್ಯಕ್ಷ ಹಸನ್ಸಾಬ್ ದೋತಿಹಾಲ್ ಅವರನ್ನು ಗದಗ ಜಿಲ್ಲೆಯ ವಾರ್ರೂಂ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಹಾಗೂ ಡಾ.ನಾಸೀರ್ ಹುಸೇನ್ ಅವರನ್ನು ವಿಜಯಪುರ ಜಿಲ್ಲೆಯ ವಾರ್ರೂಂ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ ಒಟ್ಟಾರೇ ಕೆಪಿಸಿಸಿಯಿಂದ ರಚನೆಯಾಗುವ ಪ್ರತಿಯೊಂದು ಸಮಿತಿಯಲ್ಲಿ ಮುಸ್ಲಿಂ ಸಮಾಜದ ಮುಖಂಡರು ಮತ್ತು ಕಾರ್ಯಕರ್ತರಿಗೆ ಪ್ರಾತಿನಿದ್ಯವನ್ನು ನೀಡಲಾಗುತ್ತಿದೆ.
ಕೆಪಿಸಿಸಿ ಕೋ ಆರ್ಡಿನೇಟರ್ ಆಸಿಫ್ ಹಯಾತ್ ಮಾತನಾಡಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹೊಸ ಜವಾಬ್ದಾರಿ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಮುಂಬರುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಹೇಳಿದ್ದಾರೆ.
ವರದಿ: ತೇ.ಮೀಂ.ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.