ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್): ಎಐಸಿಸಿ ಮಹಿಳಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ನೆಟ್ಟ ಡಿಸೋಜ ಅವರ ಅನುಮೋದನೆ ಪಡೆದುಕೊಂಡು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಎಸ್ ವಿಜಯ ಧರಣಿ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರಿಗೆ ಒಂದು ಪತ್ರ ರವಾನಿಸಿ ವಿವಿಧ ಜಿಲ್ಲಾ ಘಟಕಗಳ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ರಾಮನಗರ ಜಿಲ್ಲೆಗೆ ದೀಪಾ, ವಿಜಯನಗರ ಜಿಲ್ಲೆಗೆ ಸಾಯಿರಾಬಾನು, ಬೆಂಗಳೂರು ಸೆಂಟ್ರಲ್ ಶಿಲ್ಪಾ, ಬೆಂಗಳೂರು ಉತ್ತರ ಜಿಲ್ಲೆಗೆ ರೋಹಿಣಿ ಸುರೇಶ್, ಚಿಕ್ಕಬಳ್ಳಾಪುರ ಜಿಲ್ಲೆಗೆ ವಕೀಲೆ ಯಾಸ್ಮಿನ್ ತಾಜ್ ಹಾಗೂ ತುಮಕೂರು ಜಿಲ್ಲೆಗೆ ಗೀತಾ ರಾಜಣ್ಣ ಅವರನ್ನು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕಾಗಿ ಎಐಸಿಸಿ ಮಹಿಳಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ನೆಟ್ಟ ಡಿಸೋಜ, ಮಾಜಿ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ್ನಾಥ್, ಶಾಸಕರಾದ ವಿ.ಮುನಿಯಪ್ಪ, ಎನ್ ಹೆಚ್ ಶಿವಶಂಕರ ರೆಡ್ಡಿ,ಎಸ್ ಎನ್ ಸುಬ್ಬಾರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆ ಯಾಸ್ಮೀನ್ ತಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಮಹಿಳೆಯರನ್ನು ಪಕ್ಷದತ್ತ ಸೆಳೆದು ಮುಂಬರುವ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಡಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ವಕೀಲೆ ಯಾಸ್ಮೀನ್ ತಾಜ್ ತಿಳಿಸಿದ್ದಾರೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.