ಬಳ್ಳಾರಿ (ವಿಶ್ವ ಕನ್ನಡಿಗ ನ್ಯೂಸ್) : ಬಳ್ಳಾರಿ ರೇಡಿಯೋ ಪಾರ್ಕ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮಂಜುನಾಥ್ (35) ಕೊಲೆಯಾದ ಬಿಜೆಪಿ ಕಾರ್ಯಕರ್ತರಾಗಿದ್ದಾರೆ.
ಇಬ್ಬರು ಯುವಕರಿಂದ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಹಳೇ ದ್ವೇಷದಿಂದ ಕೊಲೆಯಾದ ಯುವಕನ ಸ್ನೇಹಿತರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಬಳ್ಳಾರಿಯ ಕೌಲಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.