(www.vknews.in):ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಮಂಗಳೂರು ತಾಲೂಕು 22ನೇ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಗರದ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿಣಿ ಸಭೆ ನಿರ್ಣಯದಂತೆ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಾಹಿತ್ಯ ಸಮ್ಮೇಳನವನ್ನು ಇದೇ ಅಕ್ಟೋಬರ್ 30 ರಂದು ಭಾನುವಾರ ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಸುವುದೆಂದು ನಿರ್ಧರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣದ ಬಳಿಕ ಸಮ್ಮೇಳನ ಉದ್ಘಾಟನಾ ಸಮಾರಂಭ, ಆ ಬಳಿಕ ವಿಚಾರ ಗೋಷ್ಠಿ, ಕವಿ ಗೋಷ್ಠಿ ಹಾಗೂ ಶಾರದಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿರುವುದು. ದಿನವಿಡೀ ನಡೆಯುವ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದ ಅನೇಕ ಗಣ್ಯರು ಭಾಗವಹಿಸಿದರು. ಕಾರ್ಯ ಕಾರಣಿ ಸಮಿತಿ ಸದಸ್ಯರು ಸಮ್ಮೇಳನದ ಬಗ್ಗೆ ಅನೇಕ ಸಲಹೆ ಸೂಚನೆಗಳನ್ನು ನೀಡಿದರು. ಅಧ್ಯಕ್ಷರಾದ ಡಾ|| ಮಂಜುನಾಥ ರೇವಣ್ಕರ್ ರವರು ಎಲ್ಲರ ಸಹಕಾರದಿಂದ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆಯಿತ್ತರು. ಕಾರ್ಯದರ್ಶಿ ಡಾ|| ಮುರಲೀ ಮೋಹನ್ ಚೂಂತಾರು ರವರು ಸ್ವಾಗತಿಸಿದರು. ಇನ್ನೋರ್ವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ಅವರು ಪ್ರಸ್ತಾವಿಸಿದರು. ಖಜಾಂಚಿ ಎಸ್. ಸುಬ್ರಾಯ ಭಟ್ ರವರು ವಂದಿಸಿದರು. ಕಸಾಪ ಸಮಿತಿ ಸದಸ್ಯರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.