ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಬ್ರಿಜ್ಲಾಲ್ ಖಬಾರಿ ಅವರನ್ನು ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಖಬಾರಿ ಅವರು 2016 ರಲ್ಲಿ ಬಿಎಸ್ಪಿಯಿಂದ ಕಾಂಗ್ರೆಸ್ ಸೇರಿದ ದಲಿತ ನಾಯಕರಾಗಿದ್ದಾರೆ. ಬಿಎಸ್ಪಿ ಹಣ ಪಡೆದು ಸ್ಥಾನಗಳನ್ನು ಮಾರಾಟ ಮಾಡಿದೆ ಎಂದು ಆರೋಪಿಸಿ ಅವರು ಕಾಂಗ್ರೆಸ್ ಸೇರಿದ್ದರು.
ಅಜಯ್ ಲಲ್ಲು ರಾಜೀನಾಮೆ ನೀಡಿದ ಕೆಲವು ತಿಂಗಳ ನಂತರ ಖಬರಿ ಅವರ ನೇಮಕವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅವಮಾನಕರ ಸೋಲನ್ನು ಅನುಭವಿಸಿದ ನಂತರ ಅಜಯ್ ಲಲ್ಲು ರಾಜೀನಾಮೆ ನೀಡಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆದ್ದಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.