ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ವಿಶ್ವ ಕನ್ನಡ ಹಬ್ಬದ ಅಂತರಾಷ್ಟ್ರೀಯ ನಿರ್ದೇಶಕರಾಗಿ ಕೋಲಾರ ತಾಲೂಕಿನ ಬಗಲಹಳ್ಳಿಯ ಬಿ.ಎನ್.ಸುರೇಶ್ಬಾಬು ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ನ .೧೯ ರಂದು ದುಬೈ ಶೇಕ್ ರಶೀದ್ ಸಭಾಂಗಣದಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಚರಿಸಲು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ತೀರ್ಮಾನಿಸಿದೆ.
ಈ ಕಾರ್ಯಕ್ರಮದ ಮೂಲ ಉದ್ದೇಶ ಮೂಲ ಕನ್ನಡಿಗರ ಮತ್ತು ಅನಿವಾಸಿ ಕನ್ನಡಿಗರ ಮಧ್ಯೆ ಸಂಬಂಧ ಬೆಸೆಯುವ , ಕನ್ನಡದ ಕಂಪನ್ನು ವಿಶ್ವಕ್ಕೆ ಪಸರಿಸುವ ಈ ಸತ್ಕಾರ್ಯದಲ್ಲಿ ಸೇವೆ ಸಲ್ಲಿಸಲು ಸ್ವಯಂ ಪ್ರೇರಿತರಾಗಿ ಆಗಮಿಸಿರುವ ಬಿ . ಎನ್ . ಸುರೇಶ್ ಬಾಬುರವರನ್ನು ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆಯವರು ನಿರ್ದೇಶಕರಾಗಿ ನೇಮಕಮಾಡಿದ್ದಾರೆ.
ಸುರೇಶ್ ಬಾಬು ಮಾತನಾಡಿ , ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸದಾ ಸಮಾಜಮುಖಿ ಚಟುವಟಿಕೆಗಳಲ್ಲಿ ಪ್ರಾಮಾಣಿಕವಾಗಿ ತನ್ನನ್ನು ತಿದಾಗಿಸಿಕೊಂಡು ಬಂದಿದ್ದು , ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡುತ್ತಾ ಯಶಸ್ವಿಯಾಗಿ ಮುಂದೆ ಸಾಗುತ್ತಿದೆ.
ನವೆಂಬರ್ ೧೯ ರಂದು ದುಬೈನಲ್ಲಿ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಈ ಕಾರ್ಯಕ್ರಮದಲ್ಲಿ ನನ್ನದೊಂದು ಅಳಿಲು ಸೇವೆ ಇರಲಿ ಎಂಬ ಆಶಯ ಹೊತ್ತು ಬಂದ ನನಗೆ ಅಂತಾರಾಷ್ಟ್ರೀಯ ನಿರ್ದೇಶಕರನ್ನಾಗಿ ನೇಮಕ ಮಾಡಿ ಮಹತ್ತರವಾದ ಜವಾಬ್ದಾರಿ ನೀಡಿದ್ದಾರೆ. ನನಗೆ ನೀಡಿರುವ ಸ್ಥಾನಕ್ಕೆ ನ್ಯಾಯ ಒದಗಿಸಿ , ಇಚ್ಛೆಯಿಂದ ಕೆಲಸ ಮಾಡುವ ಮೂಲಕ ಕಾರ್ಯಕ್ರಮ ಯಶಸ್ವಿಗೆ ಕೈ ಜೋಡಿಸುತ್ತೇನೆ ಎಂದರು.
ವಿಶ್ವ ಕನ್ನಡ ಹಬ್ಬದ ಸಂಯೋಜನಾಧಿಕಾರಿ ಗುಣವಂತ ಮಂಜು , ಕಾರ್ಯದರ್ಶಿ ಮಂಜುಳಾ ಪಾವಗಡರವರು ಸುರೇಶ್ ಬಾಬುರವರಿಗೆ ಅಭಿನಂದನೆಗಳನ್ನು ತಿಳಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.