ಕುಂದಾಪುರ, (ವಿಶ್ವ ಕನ್ನಡಿಗ ನ್ಯೂಸ್ ): ಇಲ್ಲಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಮಾಸ್ತಿ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ.ಮಾಸ್ತಿ ಎಂಬುವವರ ಮನೆಯಲ್ಲಿ ಆವರಣವಿಲ್ಲದ ಬಾವಿಗೆ ಬಾನುವಾರ ರಾತ್ರಿ ಚಿರತೆ ಬಿದ್ದಿದ್ದು ಸೋಮವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ಮನೆಮಂದಿ ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಬೋನನ್ನು ಬಾವಿಗೆ ಇಳಿಬಿಟ್ಟು ನಾಜೂಕಾಗಿ ಕಾರ್ಯಾಚರಣೆ ನಡೆಸಿ ಅಂದಾಜು 4-5 ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ ಟಿ.ಕಿರಣ್ ಬಾಬು, ಆಲೂರು ಉಪ ವಲಯ ಅರಣ್ಯಾಧಿಕಾರಿ ದಿಲೀಪ್ ಕುಮಾರ್, ಜಡ್ಕಲ್ ಶಾಖೆ ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಅರಣ್ಯ ರಕ್ಷಕ ಆನಂದ ಬಳೆಗಾರ, ರಮೇಶ, ಮಂಜುನಾಥ ಗಾಣಿಗ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.