ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್) ಕಾಂಗ್ರೆಸ್ ಪಕ್ಷದೊಳಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಅಧ್ಯಕ್ಷರ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ಹೇಳಿದರು.
ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರಿಗೆ ಮಾತನಾಡಿದ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಪಕ್ಷ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ ಎಂಬುದಕ್ಕೆ ಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಯಶಸ್ಸನ್ನು ಮುಂದುವರೆಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರ ವರೆಗೆ ನಡೆಯುತ್ತಿರುವ ಭಾರತ್ ಜೋಡು ಯಾತ್ರೆಗೆ ನಿರೀಕ್ಷೆಗಿಂತ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.
ಭಾರತ ಜೋಡೋ ಯಾತ್ರೆಯಲ್ಲಿ ನಿರುದ್ಯೋಗಿಗಳು, ಯುವಕರು, ರೈತರು, ಕೂಲಿಕಾರ್ಮಿಕರು,ಮಹಿಳೆಯರು ಸೇರಿದಂತೆ ಎಲಾ ವರ್ಗದ ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ರಾಹುಲ್ ಗಾಂಧಿಗೆ ಮನವಿ ಮಾಡುತ್ತಿದ್ದಾರೆ ಭಾರತ್ ಚೊಲೋ ಯಾತ್ರೆ ಯಶಸ್ವಿ ಹಾಗೂ ರಾಹುಲ್ ಗಾಂಧಿಯವರ ಜನಪ್ರಿಯತೆಯನ್ನು ನೋಡಿ ಪ್ರತಿಪಕ್ಷಗಳೆಲ್ಲರು ಹತಾಶರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
2023 ರಲ್ಲಿ ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಮತ್ತು 2024 ರಲ್ಲಿ ನಡೆಯುವ ಲೋಕಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಉತ್ತಮ ಪ್ರದರ್ಶನ ನೀಡಲಿದ್ದು, ಜನಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ ರೈತರು ವ್ಯಾಪಾರ ಪ್ರಮಾಣದಲ್ಲಿ ಬೆಳೆಗಳನ್ನು ಕಳೆದುಕೊಂಡಿದ್ದಾರೆ ಜಿಲ್ಲಾಡಳಿತ ಅವರಿಗೆ ಕೂಡಲೇ ಪರಿಹಾರ ನೀಡಬೇಕು ಜೊತೆಗೆ ಜಲ ಮೂಲಗಳಾದ ಕೆರೆಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ಮನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರುವ ಕೆರೆಗಳನ್ನು ಮತ್ತು ಕಟ್ಟೆಗಳನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಜಿಲ್ಲೆಯಾದ್ಯಂತ ಕೆರೆ ಕುಂಟೆಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ ಮರು ಸರ್ವೇ ಮಾಡಬೇಕೆಂದು ಆಗ್ರಹಿಸಿದರು.
ವರದಿ: ತೇ.ಮೀಂ.ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.