ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್) ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಹೋಬಳಿಯ ಕೆಂಕರೆ ಗ್ರಾಮದ ಕೆರೆ ಕಟ್ಟೆಯೊಡೆದು ನೀರು ನುಗ್ಗಿ ಬೆಳೆ, ಮನೆ ಹಾನಿಯಾದ ಪ್ರದೇಶಗಳ ಸ್ಥಳಕ್ಕೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಬೆಳೆಹಾನಿ ಪ್ರದೇಶಗಳ ರೈತರೊಂದಿಗೆ ಸಂವಾದ ನಡೆಸಿ ಈ ಕಟ್ಟೆ ಒಡೆದಿದ್ದರಿಂದ 179 ಎಕರೆ ಕೆರೆ ಅಚ್ಚು ಕಟ್ಟು ಪ್ರದೇಶ ಮತ್ತು 27 ಮನೆಗಳಿಗೆ ಹಾನಿಯಾಗಿದ್ದು ಶೀಘ್ರಗತಿಯಲ್ಲಿ ಎನ್.ಡಿ.ಆರ್.ಎಫ್ ನಿಯಮಾವಳಿಯನ್ವಯ ಮಳೆಹಾನಿಗೆ ಪರಿಹಾರ ನೀಡಲಾಗುವುದು. ಜೊತೆಗೆ ಕೆರೆಯ ಪುನಶ್ಚೇತನ ಕಾರ್ಯ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಶೀಘ್ರದಲ್ಲಿಯೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿ ಹಣ ಮಂಜೂರು ಮಾಡಿಸಿಕೊಂಡು ಕೆರೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಗೌರಿಬಿದನೂರು ತಾಲ್ಲೂಕಿನ ತಹಸೀಲ್ದಾರ್ ಶ್ರೀನಿವಾಸ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ಹಣಾಧಿಕಾರಿ ಹರೀಶ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಗಾಯಿತ್ರಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಆಂಜನೇಯ ರೆಡ್ಡಿ, ಕೃಷಿ ಇಲಾಖೆಯ ಉಪನಿರ್ದೇಶಕಿ ಜಾವಿದಾ ನಸೀಮಾ ಖಾನಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ತೇ.ಮೀಂ.ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.