ಶಿಡ್ಲಘಟ್ಟ,ಅಕ್ಟೋಬರ್21: ಹಂಡಿಗನಾಳ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ನಮ್ಮ ಕುಟುಂಬದವರು ಸೇರಿ ನಿರ್ಮಿಸಿರುವ ಶ್ರೀವೇಣುಗೋಪಾಲಸ್ವಾಮಿ ದೇವಾಲಯದ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಇದೆ ತಿಂಗಳ 26 ರಿಂದ ಮೂರು ದಿನಗಳ ಕಾಲ ನಡೆಸಲಾಗುವುದು ಎಂದು ಶಿಡ್ಲಘಟ್ಟ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ತಿಳಿಸಿದರು.
ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಸುಮಾರು 2 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ಶ್ರೀವೇಣುಗೋಪಾಲಸ್ವಾಮಿ ದೇವಾಲಯದ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಶಾಸಕರು ಗ್ರಾಮಸ್ಥರ ಸಹಕಾರದಿಂದ ದೇವಾಲಯದ ಕಾಮಗಾರಿ ಉತ್ತಮವಾಗಿ ಮೂಡಿಬಂದಿದೆ ಅಂತಿಮ ಹಂತದ ಕೆಲಸಗಳಷ್ಟೆ ಬಾಕಿ ಉಳಿದಿದ್ದು ಭವ್ಯವಾದ ಕಲ್ಲಿನ ದೇವಾಲಯದ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದ್ದು ಪ್ರತಿಷ್ಠಾಪನೆಗಾಗಿ ಸಕಲ ಸಿದ್ದತೆಗಳನ್ನು ನಡೆದಿವೆ ಎಂದರು.
ಸಮಾಜದಲ್ಲಿ ಪ್ರತಿಯೊಬ್ಬರು ತಮ್ಮ ಕೆಲಸ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ ಆದರೇ ಮನಸ್ಸಿಗೆ ನೆಮ್ಮದಿ ನೀಡುವ ಕೇಂದ್ರಗಳು ಯಾವುದಾದರೂ ಇದ್ದರೆ ಅದು ಧಾರ್ಮಿಕ ಕೇಂದ್ರಗಳು ಮಾತ್ರ ದೇವರ ಧ್ಯಾನ ಮಾಡುವುದರಿಂದ ಸಕಲವೂ ಪ್ರಾಪ್ತಿವಾಗುತ್ತದೆ ಆಸ್ತಿ ಅಂತಸ್ತುಗಿಂತಲೂ ನೆಮ್ಮದಿ ಬಹಳ ಮುಖ್ಯ ಎಲ್ಲರು ಧಾರ್ಮಿಕ ಸೇವಾ ಕಾರ್ಯಗಳನ್ನು ಮಾಡಿ ಆಧ್ಯಾತ್ಮಿಕ ಮನೋಭಾವ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದ ಶಾಸಕರು ದೇವಾಲಯದ ಪ್ರತಿಷ್ಠಾಪನೆ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತನ ಆಶೀರ್ವಾದ ಪಡೆದು ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಂಡಿಗನಾಳ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀನಿವಾಸ್, ಹೀರೋ ಶೂರೊಂ ಮಾಲೀಕ ಭಕ್ತರಹಳ್ಳಿ ಲಕ್ಷ್ಮೀನಾರಾಯಣ, ರವಿಕುಮಾರ್, ಶಂಕರಪ್ಪ, ಯುವ ಮುಖಂಡರಾದ ಬಾಂಬೆ ನವಾಝ್, ಮುಸ್ತು ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.