ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಹಾರಿಕಾ ಅನುಮಾನಾಸ್ಪದವಾಗಿ ಮೃತಪಟ್ಟ ಮಹಿಳೆ. ಇವರ ಮೃತದೇಹವು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರ ಕುಟುಂಬಸ್ಥರು ಗಂಡನೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಗಂಡನ ಕಿರುಕುಳ ತಾಳಲಾರದೆ ನಿಹಾರಿಕಾ ಕೆಲ ದಿನಗಳ ಹಿಂದೆ ಅಕ್ಕನ ಮನೆಗೆ ಬಂದಿದ್ದರು, ಆದರೆ ಎರಡು ದಿನಗಳ ಹಿಂದೆ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಹೇಳಿ ಪತಿ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.