ಬೆಳಗಾವಿ (ವಿಶ್ವ ಕನ್ನಡಿಗ ನ್ಯೂಸ್) : ದ್ವಿಚಕ್ರದಲ್ಲಿ ತಂದೆಯೊಂದಿಗೆ ಮಾರುಕಟ್ಟೆಗೆ ಹೋಗಿ ದೀಪಾವಳಿಗೆ ಬಟ್ಟೆ ಖರೀದಿಸಿ ಮನೆಗೆ ಹೋಗುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಐದು ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ 4ಲ್ಲಿ ನಡೆದಿದೆ. ವರ್ಧನ(5) ಮೃತಪಟ್ಟ ಬಾಲಕ.
ತಂದೆಯೊಂದಿಗೆ ಬೆಳಗಾವಿಗೆ ಬಟ್ಟೆ ಖರೀದಿಗೆ ಬಂದಿದ್ದ ಬಾಲಕ ನಗರದಲ್ಲಿ ಬಟ್ಟೆ ಖರೀದಿಸಿ ಮನೆಗೆ ಹೊರಟಾಗ ದ್ವಿಚಕ್ರ ವಾಹನದ ಮುಂಭಾಗದಲ್ಲಿ ವರ್ಧನ ಕುಳಿತುಕೊಂಡಿದ್ದನು. ಈ ವೇಳೆ ಗಾಳಿಪಟದ ದಾರ ನೇರವಾಗಿ ವರ್ಧನ ಕುತ್ತಿಗೆಗೆ ಬಿಗಿದು ಸ್ಥಳದಲ್ಲಿಯೇ ಅಸುನೀಗಿದ್ದಾನೆ. ತಂದೆ ಎಷ್ಟೇ ಪ್ರಯತ್ನಿಸಿದರೂ ಬಾಲಕ ವರ್ಧನ ಬದುಕಿ ಉಳಿಯಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.