ಪುತ್ತೂರು (www.vknews.in) : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಎಸ್ಕೆಎಸ್ಸೆಸ್ಸೆಫ್ ದ.ಕ. ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಮಾದಕ ವ್ಯಸನದ ವಿರುದ್ಧ ‘ಜನಸಂಚಲನ’ ಎಂಬ ವಿಶೇಷ ಕಾರ್ಯಕ್ರಮ ಮಂಗಳವಾರ ವಿವಿಧೆಡೆ ನಡೆಯಲಿದೆ. ‘ಆರೋಗ್ಯ ಕರ್ನಾಟಕಕ್ಕೆ ಯುವಜನ ಜಾಗೃತಿ’ ಎಂಬ ಧ್ಯೇಯದೊಂದಿಗೆ ಈಸ್ಟ್ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ, ಮಾಣಿ, ಉಪ್ಪಿನಂಗಡಿ, ಪುತ್ತೂರು, ಕಡಬ, ಕುಂಬ್ರ, ಸುಳ್ಯ ವಲಯಗಳ ಅಧೀನದಲ್ಲಿರುವ 35 ಕ್ಲಸ್ಟರ್ಗಳಲ್ಲಿ ಈ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ವಿವಿಧ ಧಾರ್ಮಿಕ ಗುರುಗಳು, ಸಮಾಜಿಕ ಮುಖಂಡರು, ಸರಕಾರಿ ಅಧಿಕಾರಿಗಳು, ಚಿಂತಕರು, ವಾಗ್ಮಿಗಳು ವಿಶೇಷ ಅತಿಥಿಗಳಾಗಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಮೇಯ ಭಾಷಣ, ಕರಪತ್ರ ಹಂಚಿಕೆ, ಪ್ಲೇ ಕಾರ್ಡ್ ಪ್ರದರ್ಶನ, ಪ್ರತಿಜ್ಞೆ ಬೋಧನೆ ಕಾರ್ಯಕ್ರಮಗಳು ನಡೆಯಲಿದೆ ಎಂದು ದ.ಕ. ಈಸ್ಟ್ ಜಿಲ್ಲಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.