ವಜೀರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಇಮ್ರಾನ್ ಖಾನ್ ಹಾಗು ಪಕ್ಷದ ಇತರ ನಾಯಕರ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಕ್ಷದ ಕಾರ್ಯಕರ್ತರು ಸ್ಥಳದಲ್ಲಿಯೇ ಬಂಧಿಸಿದರು.
ಇಮ್ರಾನ್ ಖಾನ್ ನೇತೃತ್ವದ ಸ್ವಾತಂತ್ರ್ಯ ರ್ಯಾಲಿಯಲ್ಲಿ ಈ ಘಟನೆ ನಡೆದಿದೆ. ಕಾಲಿಗೆ ಗುಂಡು ತಗುಲಿದ ಇಮ್ರಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪಿಟಿಐ ನಾಯಕ ಫೈಸಲ್ ಜಾವೇದ್ ಕೂಡ ಸೇರಿದ್ದಾರೆ.
ಸಂಜೆ 4.21ರ ಸುಮಾರಿಗೆ ವಜೀರಾಬಾದ್ನ ಅಲ್ಲಾಹೋ ಚೌಕ್ನಲ್ಲಿ ನಡೆದ ರ್ಯಾಲಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ಇಮ್ರಾನ್ ಖಾನ್ ಅವರ ರ್ಯಾಲಿ ಕಳೆದ ತಿಂಗಳು 28 ರಂದು ಲಾಹೋರ್ ನಿಂದ ಪ್ರಾರಂಭವಾಯಿತು. ಈ ರ್ಯಾಲಿ ಇಸ್ಲಾಮಾಬಾದ್ ನಲ್ಲಿ ಮುಕ್ತಾಯಗೊಳ್ಳಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.