ತ್ರಿಶ್ಶೂರ್ (ವಿಶ್ವ ಕನ್ನಡಿಗ ನ್ಯೂಸ್) : ಎದೆಹಾಲು ಗಂಟಲಲ್ಲಿ ಸಿಲುಕಿಕೊಂಡ ಪರಿಣಾಮ ನಾಲ್ಕು ತಿಂಗಳ ಹೆಣ್ಣು ಮಗು ಮೃತಪಟ್ಟಿರುವ ಘಟನೆ ತ್ರಿಶೂರ್ ನ ಆಲೂರು ಎಂಬಲ್ಲಿ ನಡೆದಿದೆ. ಮೃತರನ್ನು ಆಲೂರಿನ ಎಡತಾಡನ್ ಜಂಕ್ಷನ್ ಬಳಿಯ ಮಣಿ ಪರಂಬಿಲ್ ನ ಅಬಿ ಮತ್ತು ಶೆಲ್ಗಾ ಅವರ ಕಿರಿಯ ಮಗಳು ಹೇಜಲ್ ಎಂದು ಗುರುತಿಸಲಾಗಿದೆ.
ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಜ್ಞೆ ತಪ್ಪಿದ್ದ ಮಗುವನ್ನು ಚಲಕುಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಮಗುವಿನ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಗಂಟಲಿನಲ್ಲಿ ಸಿಲುಕಿದ ಎದೆಹಾಲು ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಮಗುವಿನ ಅಂತ್ಯಸಂಸ್ಕಾರವನ್ನು ನಡೆಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.