ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ಮುಹಮ್ಮದ್ ಸಭಾನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಭಾನ್ ಹಾಗು ಅದೇ ಶಾಲೆಯ ಮತ್ತೋರ್ವ ವಿದ್ಯಾರ್ಥಿಯ ನಡುವೆ ಸೋಮವಾರ ಕ್ಷುಲ್ಲುಕ ಕಾರಣಕ್ಕೆ ಜಗಳ ಉಂಟಾಗಿತ್ತು, ಇದನ್ನು ನೆಪವಾಗಿಟ್ಟುಕೊಂಡು ಮತ್ತೋರ್ವ ವಿದ್ಯಾರ್ಥಿಯ ಕಡೆಯ ಮಹಿಳೆ ಸಹಿತ ತಂಡವೊಂದು ಶಾಲೆ ಬಿಟ್ಟು ಮನೆಗೆ ಮರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಭಾನ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿ ಜಸೀಲ್ ಮತ್ತು ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ವಿದ್ಯಾರ್ಥಿಗೆ ಗಂಭೀರವಾಗಿ ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.