ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) : ಹೆದ್ದಾರಿಯ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಒರ್ವ ಮೃತಪಟ್ಟು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮಂಗಳೂರಿನಲ್ಲಿ ನಡೆಯುವ ಭಾರತೀಯ ಮಜ್ದೂರ್ ಸಂಘದ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಖಾಸಗಿ ಪ್ರಿಂಟರ್ಸ್ ನವರು ಬ್ಯಾನರ್ ಸಿದ್ದಪಡಿಸಿ ಅಳವಡಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ವಿದ್ಯುತ್ ಲೈನಿಗೆ ತಾಗಿ ಈ ಅನಾಹುತ ಸಂಭವಿಸಿದೆ. ಸ್ಥಳೀಯರು ತಕ್ಷಣವೇ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಓರ್ವ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು ಓರ್ವ ಚೇತರಿಸಿ ಕೊಳ್ಳುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.