ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಯಿಂದ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ನಗು ಸಿಟಿಯಲ್ಲಿ ಸೋಮವಾರ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿದ ವತಿಯಿಂದ ನಡೆದ ಮನೆಮನೆಗೆ ಕುಡಿಯುವ ನೀರು, ಮರವಂತೆ ಮೀನುಗಾರಿಕಾ ಬಂದರು, ಏತನೀರಾವರಿ ಯೋಜನೆಯ ಸಹಿತ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮ ನಡೆಯಿತು . ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ಹಾಗೂ ಹಕ್ಕುಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ,ಸಂಸದ ಬಿ ವೈ ರಾಘವೇಂದ್ರ ,ಸಚಿವರಾದ ಗೋವಿಂದ ಎಂ. ಕಾರಜೋಳ, ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ. ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿ ಎಂ ಕೂರ್ಮಾ ರಾವ್ ಸ್ವಾಗತಿಸಿದರು. ಪತ್ರಕರ್ತ ರಾಜೇಶ್ ಕೆ.ಸಿ ಕಾರ್ಯಕ್ರಮವನ್ನು ನಿರೂಪಿಸಿದರು.ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಧನ್ಯವಾದ ಸಮರ್ಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.