ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತಾ ಎಂಬಾಕೆಯೇ ನಾಪತ್ತೆಯಾದ ಯುವತಿ.
ನವೆಂಬರ್ 8 ಮಂಗಳವಾರ ಮನೆಯಿಂದ ಹೊರಟವಳು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಉದ್ಯೋಗ ಸಂದರ್ಶನಕ್ಕೆಂದು ಮನೆಯವರಲ್ಲಿ ಹೇಳಿ ತೆರಳಿದ ಈಕೆ ನಂತರ ಮನೆಗೆ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಯುವತಿ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.