(www.vknews.in) ಕನ್ನಡಿಗರಲ್ಲಿ ನಾಡು ನುಡಿ ಸಂಸ್ಕೃತಿ ಬಗ್ಗೆ ಒಲವು ಮೂಡಿಸುವ ಸಲುವಾಗಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡು ನುಡಿ ಸಂಸ್ಕೃತಿ ಬಗ್ಗೆ ಇರುವ ನಾಡ ಗೀತೆಗಳನ್ನು ಹಾಡಲು ನಾಡಿನ ಸಮಸ್ತ ಜನರಲ್ಲಿ ತಿಳಿಸಿದ್ದು ಕರ್ನಾಟಕ ಸರ್ಕಾರದ ಕನ್ನಡ ಭಾಷೆ ಮತ್ತು ಸಂಸ್ಕೃತಿ ಇಲಾಖೆಯು ನನ್ನ ನಾಡು ನನ್ನ ಹಾಡು ಎಂಬ ಶೀರ್ಷಿಕೆಯಲ್ಲಿ ಕೈಗೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಹೆಮ್ಮೆಯ ದುಬೈ ಕನ್ನಡ ಸಂಘದ ಸಾರಥ್ಯದಲ್ಲಿ ಇಂದು ದುಬೈಯಲ್ಲಿ ಕನ್ನಡಿಗರು ಧ್ವನಿಗೂಡಿಸಿದರು.
ವಿಶ್ವದ ಅತೀ ದೊಡ್ಡ ಕಟ್ಟಡ ದುಬೈಯಲ್ಲಿರುವ ಬುರ್ಜ್ ಖಲೀಫಾ ಬಳಿ ಇರುವ ಜದಾಫ್ ಕ್ರೀಕ್ ಸಮುದ್ರ ಕಿನಾರೆಯಲ್ಲಿ ನವೆಂಬರ್ 6ರಂದು ಕನ್ನಡಿಗರು ಕನ್ನಡ ಧ್ವಜ ಹಿಡಿದು ಕರ್ನಾಟಕದ ನಾಡ ಗೀತೆ, ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಮತ್ತು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಮುಂತಾದ ಗೀತೆಗಳನ್ನು ಹಾಡುವ ಮೂಲಕ ಕರ್ನಾಟಕ ಸರ್ಕಾರದ ಅಭಿಯಾನದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು. ಇದೇ ವೇಳೆಯಲ್ಲಿ ನಮ್ಮನ್ನು ಅಗಲಿದ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಸ್ಮರಣೆಯನ್ನು ಮಾಡಿದರು. ಕಾರ್ಯಕ್ರಮದಲ್ಲಿ ಹೆಮ್ಮೆಯ ಕನ್ನಡಿಗರು ಸಂಘದ ಅಧ್ಯಕ್ಷರಾದ ಸುದೀಪ್ ದಾವಣಗೆರೆ, ಮಾಜಿ ಅಧ್ಯಕ್ಷರಾದ ಶ್ರೀಮತಿ ಮಮತಾ ಮೈಸೂರು, ಮುಖ್ಯ ಸಂಚಾಲಕರಾದ ರಫೀಕಲಿ ಕೊಡಗು, ಸಮಿತಿ ಸದಸ್ಯರಾದ ಪಲ್ಲವಿ ದಾವಣಗೆರೆ, ಅಕ್ರಮ್ ಕೊಡಗು ಮತ್ತು ನಜೀರ ಮಂಡ್ಯ ಮುಂತಾದವರು ಇತರ ಕನ್ನಡಿಗರೊಂದಿಗೆ ಕೋಟಿ ಕಂಠ ಗಾಯನ ಕಾರ್ಯಕರಮದಲ್ಲಿ ಜೊತೆಗೂಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.