(www.vknews.in) ಮಂಗಳೂರು ನಂ. 3: ಶಕ್ತಿನಗರ ಶಕ್ತಿ ಪದವಿ ಪೂರ್ವ ಕಾಲೇಜಿನ 19ರ ಒಳಗಡೆಯ ವಯೋಮಿತಿಯ ಬಾಲಕರ ವಾಲಿಬಾಲ್ ತಂಡವು ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದ ರಾಜ್ಯ ಮಟ್ಟದ ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ. ಶಕ್ತಿ ಪಪೂ ಕಾಲೇಜಿನ ದೈಹಿಕ ಶಿಕ್ಷಕರಾದ ಮನೋಜ್ ರವರು ತರಬೇತುದಾರರಾಗಿದ್ದು ಮಾರ್ಗದರ್ಶನ ಮಾಡಿರುತ್ತಾರೆ. ಈ ಮೂಲಕ ಶಕ್ತಿ ಪಪೂ ಕಾಲೇಜು ವಾಲಿಬಾಲ್ ತಂಡ ಇದೇ ಬರುವ ನವೆಂಬರ್ 28ರಿಂದ ಉತ್ತರ ಪ್ರದೇಶದ ವೃಂದಾವನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದೆ. ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೈಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅಭಿನಂದಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.