ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಘೋಷಣೆ ಮಾಡಿದ್ದಾರೆ. ತನ್ವೀರ್ ಸೇಠ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಬೆಂಬಲ ಘೋಷಿಸಿದ್ದಾರೆ.
ಟಿಪ್ಪುವಿನ ಪ್ರತಿಮೆಯನ್ನು ಏಕೆ ನಿರ್ಮಿಸಬಾರದು?, ಅವರು ಅದಕ್ಕೆ ಅರ್ಹರಲ್ಲವೇ?, ಬಿಜೆಪಿ ಇತಿಹಾಸವನ್ನು ತಿರುಚುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಟಿಪ್ಪು ಸುಲ್ತಾನ್ ಆಡಳಿತ ಕೇಂದ್ರವಾಗಿದ್ದ ಶ್ರೀರಂಗಪಟ್ಟಣ ಅಥವಾ ಮೈಸೂರಿನಲ್ಲಿ ಪ್ರತಿಮೆ ನಿರ್ಮಿಸಲಾಗುವುದು ಎಂದು ತನ್ವೀರ್ ಸೇಠ್ ತಿಳಿಸಿದ್ದಾರೆ. ಇತಿಹಾಸವನ್ನು ತಿರುಚಿ ಟಿಪ್ಪು ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿಯ ನಡೆಯನ್ನು ಎದುರಿಸಲು ಪ್ರತಿಮೆ ನಿರ್ಮಿಸಲಾಗುತ್ತಿದೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಟಿಪ್ಪುವಿನ ಪ್ರತಿಮೆಯನ್ನು ಅವರು ಮುಸ್ಲಿಂ ದೊರೆ ಎಂಬ ಕಾರಣಕ್ಕಾಗಿ ನಿರ್ಮಿಸಲಾಗುತ್ತಿಲ್ಲ, ಅವರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.