ಭುವನೇಶ್ವರ (ವಿಶ್ವ ಕನ್ನಡಿಗ ನ್ಯೂಸ್) : ರ್ಯಾಗಿಂಗ್ ವೇಳೆ ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಐವರು ಹಿರಿಯ ವಿದ್ಯಾರ್ಥಿಗಳನ್ನು ಭುವನೇಶ್ವರದಲ್ಲಿ ಬಂಧಿಸಲಾಗಿದೆ. ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಆರೋಪದ ಮೇಲೆ ವಿದ್ಯಾರ್ಥಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಒಡಿಶಾದ ಬೆರ್ಹಾಮ್ಪುರದ ವಿನಾಯಕ ಆಚಾರ್ಯ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ರ್ಯಾಗಿಂಗ್ ಗಾಗಿ ಬಾಲಕಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಈ ಘಟನೆಯ ವೀಡಿಯೊ ಬಹಿರಂಗವಾಗಿತ್ತು. ವೀಡಿಯೊದಲ್ಲಿ, ಹಿರಿಯ ವಿದ್ಯಾರ್ಥಿಯು ಚುಂಬಿಸಲು ಒತ್ತಾಯಿಸುವುದನ್ನು ಕಾಣಬಹುದು ಮತ್ತು ವಿದ್ಯಾರ್ಥಿನೀ ನಿರಾಕರಿಸಿದಾಗ ಕೋಲಿನಿಂದ ಹೊಡೆಯುವುದನ್ನು ಕಾಣಬಹುದು. ವೀಡಿಯೊದಲ್ಲಿ, ಹಿರಿಯ ವಿದ್ಯಾರ್ಥಿನಿಯೊಬ್ಬಳು ಬಾಲಕಿಯ ಕೈಯನ್ನು ಬಲವಂತವಾಗಿ ಹಿಡಿದು, ಸ್ಥಳದಿಂದ ಎದ್ದೇಳಲು ಪ್ರಯತ್ನಿಸುತ್ತಿರುವಾಗ ಅವಳನ್ನು ತಡೆಯುತ್ತಿರುವುದನ್ನು ಕಾಣಬಹುದು.
ಈ ಕಾಲೇಜು ಗಂಜಾಮ್ ಜಿಲ್ಲೆಯಲ್ಲಿದೆ. ಘಟನೆಯಲ್ಲಿ ಭಾಗಿಯಾಗಿರುವ 12 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಲಾಗಿದೆ. ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲರು ಹೇಳಿದರು. ಬರ್ಹಾಂಪುರದ ಪೊಲೀಸ್ ಅಧೀಕ್ಷಕರು ಈ ಘಟನೆಯು ಕೇವಲ ರ್ಯಾಗಿಂಗ್ ಗೆ ಸಂಬಂಧಿಸಿದ್ದಲ್ಲ, ಆದರೆ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯವೂ ಆಗಿದೆ ಎಂದು ಹೇಳಿದರು.
ಪ್ರಕರಣದ ಪ್ರಮುಖ ಆರೋಪಿ ಅಭಿಷೇಕ್ (24) ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಅವರು ಆಡಳಿತಾರೂಢ ಬಿಜು ಜನತಾದಳದ ವಿದ್ಯಾರ್ಥಿ ಘಟಕದ ಸದಸ್ಯರಾಗಿದ್ದಾರೆ. ವಶಕ್ಕೆ ಪಡೆದ ಐವರು ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.