ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ): ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ತಾಲ್ಲೂಕಿನ ಪಾತನೆಲವಂಕಿ ಗ್ರಾಮದಲ್ಲಿ ಏರ್ಪಡಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಾಗುತ್ತದೆ . ಇನ್ನು ಕೆಲವು ಸಮಸ್ಯೆಗಳನ್ನು ಕಾಲ ಮಿತಿಯಲ್ಲಿ ಪರಿಹರಿಸಲಾಗುವುದು . ಗ್ರಾಮದ ಸ್ಮಶಾನ ಒತ್ತುವರಿ ತೆರವುಗೊಳಿಸಿ , ಶಾಂತಿ ಧಾಮ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು.
ಕೆರೆಯಲ್ಲಿ ನೀರು ಮುಗಿದ ಬಳಿಕ ಕೆರೆ ಒತ್ತುವರಿ ತೆರವುಗೊಳಿಸಿ ಕೆರೆ ಅಭಿವೃದ್ಧಿ ಕೈಗೊಳ್ಳಲಾಗುವುದು ಪಹಣಿ ಜೋಡಣೆಗೆ ಕ್ರಮ ಕೈಗೊಳ್ಳಾಗುವುದು, ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು ಎಂದು ಹೇಳಿದರು. ವಿವಿಧ ಇಲಾಖೆಗಳ ಮುಖ್ಯಸ್ಥರು ಮಾತನಾಡಿ , ತಮ್ಮ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ 10 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ವಿತರಿಸಲಾಯಿತು.
ವಿವಿಧ ಇಲಾಖೆಗಳ ಅಧಿಕಾರಿಗಳಾದ ಮಂಜುನಾಥ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌಸ್ಸಾಬ್ , ಎಂ.ನಾರಾಯಣಸ್ವಾಮಿ , ಡಾ.ವಿಶ್ವನಾಥ್ , ಡಾ.ಕವಿತ , ಡಾ . ಮಂಜುನಾಥ್ , ಎಂ.ಶ್ರೀನಿವಾಸನ್ , ಕೃಷ್ಣಪ್ಪ , ಮಂಜುನಾಥ್ , ಅಬೀಬ್ , ಮೆಘಾ ನಾಯಕ್ , ವಿರೂಪಾಕಪ , ಬಾಬು , ನಟರಾಜ್ , ಭಾವನಾ , ಶರಣಮ್ಮ , ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಲಮೇಲಮ್ಮ , ಸದಸ್ಯರಾದ ರಘುನಾಥರೆಡ್ಡಿ , ಸಿ.ಎಂ.ರಮೇಶ್ , ಬಾಬೂರೆಡ್ಡಿ ಇದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.