ಉಪ್ಪಳ (ವಿಶ್ವ ಕನ್ನಡಿಗ ನ್ಯೂಸ್) : ಮುಂಜಾನೆ ಪ್ರಾರ್ಥನೆಗೆಂದು ಮಸೀದಿಗೆ ತೆರಳುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಬಂದ ಗುಂಪೊಂದು ಸ್ಕೂಟರ್ ತಡೆದು ನಿಲ್ಲಿಸಿ ಕಾಲಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಉಪ್ಪಳ ಮಜಲಿನ ಅಬ್ದು ಅಲಿಯಾಸ್ ಮುಹಮ್ಮದ್ ಅಫ್ಜಲ್ ಹಲ್ಲೆಗೊಳಗಾದವರು. ಅವರ ಕಾಲುಗಳಿಗೆ ಗಾಯಗಳಾಗಿದ್ದು, ಅವರನ್ನು ಮಂಗಲ್ಪಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಲ್ಟೊ ಕಾರಿನಲ್ಲಿ ಬಂದ ಐವರ ತಂಡ ಸ್ಕೂಟರ್ ತಡೆದು ಅಬ್ದು ಅವರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದೆ. ಗುಂಪಿನಲ್ಲೊಬ್ಬನು ಅವರ ಕಾಲುಗಳನ್ನು ಚೂರಿಯಿಂದ ಇರಿದಿದ್ದಾನೆ. ಕೌಟುಂಬಿಕ ಕಲಹವೇ ಹಿಂಸಾಚಾರಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಅಫ್ಜಲ್ ಮನೆ ಮೇಲೆ ಹಲವು ಬಾರಿ ದಾಳಿ ನಡೆದಿದೆ ಎನ್ನಲಾಗಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.