ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ಬಾಂಬ್ ಬ್ಲಾಸ್ಟ್ ಪ್ರಕರಣವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಭಾರತೀಯ ಜನತಾ ಪಕ್ಷವು ಮಾಡಿರುವ ಚುನಾವಣಾ ತಂತ್ರವಾಗಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷರಾದ ರಾಜೇಶ್ ಪವಿತ್ರ ವ್ಯಂಗ್ಯವಾಡಿದ್ದಾರೆ. ಅತಂಕವಾದ ಅಳಿಸಿ ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ತನ್ನದಾಗಿಸಿಕೊಂಡ ಭಾರತೀಯ ಜನತಾ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಆಡಳಿತದಲ್ಲಿರುವ ಸರಕಾರದ ವೈಫಲ್ಯವೆ ಈ ಘಟನೆಗೆ ಕಾರಣವಾಗಿದ್ದು, ಭಾರತೀಯ ಜನತಾ ಪಕ್ಷದ ಹಿಂದೂ ವಿರೋಧಿ ಸಂಘಟನೆ ಹಾಗೂ ಎಸ್ ಡಿ ಪಿ ಐ ಪಕ್ಷದ ಜೊತೆಗಿನ ಅನೈತಿಕ ಮೈತ್ರಿ ಕರಾವಳಿಯಲ್ಲಿ ಹಾಗೂ ರಾಜ್ಯದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದರು.
ಭಾರತೀಯ ಜನತಾ ಪಕ್ಷದ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟು, ರಾಜ್ಯದ ಜನರ ಜೀವ ಹಾಗೂ ಜೀವನದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಿ ,ಬಾಂಬ್ ಬ್ಲಾಸ್ಟ್ ನಂತಹ ವಿದ್ವಾಂಸಕ ಕೃತ್ಯವನ್ನು ಎಸಿಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ಧಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷರಾದ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.