ಹುಬ್ಬಳ್ಳಿ(ವಿಶ್ವಕನ್ನಡಿಗ ನ್ಯೂಸ್): ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾಗಿರುವ ಶ್ರೀ ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಮಂಗಳವಾರ (ನ. 29 ರಂದು) ಆಂಧ್ರಪ್ರದೇಶ ರಾಜ್ಯದ ಶ್ರೀ ರಾಯಚೋಟಿ ವೀರಭದ್ರೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ವೀರಭದ್ರ ದೇವರಿಗೆ ಹಾಗೂ ಭದ್ರಕಾಳಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸುವರು.
ನ. 29 ರಂದು (ಮಂಗಳವಾರ) ರಾಯಚೋಟಿಯ ಶ್ರೀ ವೀರಭದ್ರ ದೇವರ ದೇವಾಲಯದ ಪ್ರಾಂಗಣದಲ್ಲಿ ಧರ್ಮ ಜಾಗೃತಿ ಸಮಾರಂಭದಲ್ಲಿ ಆಶೀರ್ವಚನ ನೀಡಿದ ನಂತರ ಆಗಮಿಸುವ ಭಕ್ತರಿಗೆ ದರ್ಶನಾಶೀರ್ವಾದ ಕರುಣಿಸುವರು. ಮಂಗಳವಾರ ರಾಯಚೋಟಿ ಕ್ಷೇತ್ರದಲ್ಲಿಯೇ ವಾಸ್ತವ್ಯ ಮಾಡುವ ಕಾಶಿ ಪೀಠದ ಹಿರಿಯ ಜಗದ್ಗುರುಗಳು, ಬುಧವಾರ ಶ್ರೀ ವೀರಭದ್ರೇಶ್ವರ ದೇವರ ಹಾಗೂ ಶ್ರೀ ಭದ್ರಕಾಳಿ ಅಮ್ಮನವರ ದೇವಾಲಯಗಳ ಪೂಜಾಕೈಂಕರ್ಯಗಳಲ್ಲಿ ಭಾಗಿಯಾಗಲಿದ್ದು, ಕರ್ನಾಟಕ ರಾಜ್ಯದ ಭಕ್ತ ಸಮೂಹ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಶಿ ಜಗದ್ಗುರುಗಳ ದರ್ಶನಾಶೀರ್ವಾದ ಪಡೆಯುವಂತೆ ಶ್ರೀ ವೀರಭದ್ರೇಶ್ವರ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಸಿ.ಎಂ.ಶಿವಶರಣ ಕಲಬುರ್ಗಿ ಮನವಿ ಮಾಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.