ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮೂಲತಃ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿಯ ಪ್ರಸಕ್ತ ದುಬೈಯಲ್ಲಿ ನೆಲೆಸಿದ್ದ ಬ್ಯಾರೀಸ್ ಛೇಂಬರ್ ಆಫ್ ಕಾಮರ್ಸ್ (ಬಿಸಿಸಿಐ) ಇದರ ಯುಎಇ ಘಟಕದ ಅಧ್ಯಕ್ಷರಾಗಿದ್ದ ಎಸ್.ಎಂ.ಬಶೀರ್ (50) ಅವರು ಇಂದು ಮಧ್ಯಾಹ್ನ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಕಳೆದೊಂದು ವರ್ಷದಿಂದ ಅನಾರೋಗ್ಯಕ್ಕೀಡಾಗಿದ್ದ ಇವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.