ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ಕೇಂದ್ರ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಸರ್ಕಾರಗಳ ನೀತಿ ಮತ್ತು ಧೋರಣೆಗಳಿಂದ ಜನ ರೋಸಿ ಹೋಗಿದ್ದಾರೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಆಶಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಿರಿಯ ಶಾಸಕ ವಿ.ಮುನಿಯಪ್ಪ ಹೇಳಿದರು.
ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ, ತಾಲ್ಲೂಕು ಪಂಚಾಯತ್ ಶಿಡ್ಲಘಟ್ಟ,ಗ್ರಾಮ ಪಂಚಾಯಿತಿ ಕಾರ್ಯಾಲಯ ಮಳಮಾಚನಹಳ್ಳಿಯ ಸಂಯುಕ್ತಾಶ್ರಯದಲ್ಲಿ ಮಳಮಾಚನಹಳ್ಳಿ ಸರ್ಕಾರಿ ಪ್ರೌಢಶಾಲಾ ಅವರಣದಲ್ಲಿ ನಡೆದ ಭಾರತ್ ನಿರ್ಮಾಣ್ ರಾಜೀವ್ಗಾಂಧಿ ಸೇವಾ ಕೇಂದ್ರ,ಸಂಜೀವಿನಿ ಭವನ, (ಎನ್.ಆರ್.ಎಲ್.ಎಂ) ಅಂಗನವಾಡಿ ಕೇಂದ್ರ, ಡಿಜಿಟಲ್ ಲೈಬ್ರಲ, ಗ್ರಾಮೀಣ ಉದ್ಯಾನವನ, ಸರ್ಕಾರಿ ಪ್ರೌಢಶಾಲಾ ಕೊಠಡಿ ಉದ್ಘಾಟನೆ ಹಾಗೂ ನಿವೇಶನ ರಹಿತರಿಗೆ ಹಕ್ಕುಪತ್ರಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಬದಲಾವಣೆ ನೆಪದಲ್ಲಿ ಅಧಿಕಾರ ನೀಡಿದ ಜನರು ಇದೀಗ ಕೇಂದ್ರ ಸರ್ಕಾರದ ನೀತಿಗಳ ವಿರುಧ್ಧ ಅಸಮಾಧಾನ ಮತ್ತು ಆಕ್ರೋಶಗೊಂಡಿದ್ದಾರೆ ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮಸ್ಥರು ಪಕ್ಷಾತೀತವಾಗಿ ಮಜಿನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಿಕೊಂಡು ಬೇರೆ ಸಂದರ್ಭದಲ್ಲಿ ಗ್ರಾಮಾಭಿವೃಧ್ಧಿಗೆ ಎಲ್ಲರು ಕೈಜೋಡಿಸಬೇಕು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಎಲ್ಲರು ಸಹಕರಿಸಬೇಕೆಂದು ಮನವಿ ಮಾಡಿದರು.
ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್ ಮಾತನಾಡಿ ದೇಶ ವಿವಿಧ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದರು ಸಹ ಗ್ರಾಮ ಸ್ವರಾಜ್ಯದ ಸೊಗಡು ಉಳಿಸಿಕೊಂಡಿದೆ ಮಳಮಾಚನಹಳ್ಳಿಯಲ್ಲಿ ಕಾರ್ಪೋರೇಟ್ ಕಂಪನಿಯ ಮಾದರಿಯಲ್ಲಿ ಗ್ರಾಮ ಪಂಚಾಯತಿ ಕಚೇರಿಯನ್ನು ನಿರ್ಮಿಸಲಾಗಿದೆ ಈ ಹಿಂದೆ ಶಾಸಕ ವಿ.ಮುನಿಯಪ್ಪ ಅವರು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ 27 ಗ್ರಾಮ ಪಂಚಾಯತಿ ಕಟ್ಟಡಗಳನ್ನು ನಿರ್ಮಿಸಿದ ಅವರಿಗೆ ಸಲ್ಲುತ್ತದೆ ಎಂದರು.
ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಗ್ರಾಮ ಪಂಚಾಯತಿ ಸಬಲೀಕರಣ ಮಾಡಿದರು ಅವರ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಕೀರ್ತ ಕರ್ನಾಟಕ ಸರ್ಕಾರಕ್ಕೆ ಸಲ್ಲುತ್ತದೆ ಎಂದರಲ್ಲದೆ ಮಹಾತ್ಮಗಾಂಧಿ ಅವರ ಆಶಯದಂತೆ ಗ್ರಾಮಾಭಿವೃಧ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿ ಗ್ರಾಮೀಣಾಭಿವೃಧ್ಧಿಯ ಕನಸು ಕಂಡಿದ್ದ ಅಬ್ದುಲ್ ನಜೀರ್ ಸಾಬ್ ಅವರನ್ನು ಎಲ್ಲರು ಮರೆತ್ತಿದ್ದಾರೆ ಅವರ ಕುಟುಂಬದವರು ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ ಆದರೇ ಅವರ ಕೊನೆಯ ಘಟದಲ್ಲಿ ತಮಗಾಗಿ ಯಾವುದನ್ನು ಕೇಳದ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂಬುದು ಅವರ ಕೊನೆಯ ಆಶಯವಾಗಿತ್ತು ಎಂದರು.
ತಾಪಂ ಇಓ ಮುನಿರಾಜು ಮಾತನಾಡಿ ಮಳಮಾಚನಹಳ್ಳಿ ದೆಹಲಿಯಲ್ಲಿ ಗುರುತಿಸಿಕೊಂಡಿದೆ ಚೀಮಂಗಲ,ಆನೂರು,ಇ.ತಿಮ್ಮಸಂದ್ರ ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ಅಧ್ಯಯನ ತಂಡ ಬಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತಷ್ಟು ಅಭಿವೃಧ್ಧಿ ಕಾಮಗಾರಿಗಳನ್ನು ನಡೆಸಲು 43 ಲಕ್ಷ ರೂಗಳ ಅನುದಾನದ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಟೆಂಡರ್ ಕರೆಯಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾಗ್ಯಮ್ಮ ಪಾಪಣ್ಣ, ಉಪಾಧ್ಯಕ್ಷ ಬಿ.ಕೆ.ಲೋಕೇಶ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಪಂ ಮಾಜಿ ಅಧ್ಯಕ್ಷ ರಾಜಶೇಖರ್, ಯುವ ಮುಖಂಡ ರವಿಗೌಡ, ಗ್ರಾಪಂ ಮಾಜಿ ಅಧ್ಯಕ್ಷರಾದ ಬ್ಯಾಟರಾಯಶೆಟ್ಟಿ, ಬಿ.ಬೈರೇಗೌಡ, ಕೃಷ್ಣಯ್ಯ, ಬಸವಪಟ್ಟಣ ಬೈರೇಗೌಡ, ರಾಮಾಂಜಿ, ಗ್ರಾಪಂ ಸದಸ್ಯರಾದ ಡಿ.ಬೈರೇಗೌಡ, ದೇವರಾಜ್, ಮುರಳಿ,ಚಂದ್ರಪ್ಪ, ಮುಖಂಡರಾದ ಪಾಪಣ್ಣ,ಪಿಡಿಒ ಎ.ಶೈಲಾ ,ಕಾರ್ಯದರ್ಶಿ ಸಿ.ರಾಜಣ್ಣ, ಬಿಲ್ ಕಲೆಕ್ಟರ್ ಜಿ.ಸುರೇಶ್, ಡಿಇಓ ಸುಗುಣ,ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷ ಜಗದೀಶ್,ಸುನೀಲ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.