ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್): ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಿಗಧಿತ ಸಮಯಕ್ಕೆ ಆರಂಭಿಸದೆ ಕನಿಷ್ಠ ಮಾಲಾರ್ಪಣೆ ಮಾಡಲು ಆಸಕ್ತಿವಹಿಸದೆ ಯಾರಿಗೋಸ್ಕರ( ಆರೋಗ್ಯ ಸಚಿವ ಡಾ.ಕೆ.ಸುಧಾಕರ್) ಕಾದು ಕುಳಿತ್ತಿರುವುದು ಖಂಡನೀಯ ಮತ್ತು ನಾಚಿಕೆಗೇಡಿನ ಸಂಗತಿಯೆಂದು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಜೈಭೀಮ್ ಬಾಲಕರ ವಿದ್ಯಾರ್ಥಿನಿಲಯದ ಆವರಣದಲ್ಲಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಸರಕಾರಿ ಕಾರ್ಯಕ್ರಮವನ್ನು ನಿಗಧಿತ ಸಮಯಕ್ಕೆ ನಡೆಸಬೇಕು ಬೆಳಿಗ್ಗೆ 10:30 ಕ್ಕೆ ಮಾಡಬೇಕಾಗಿತ್ತು ಆದರೇ ಮಧ್ಯಾಹ್ನದ 12: 30 ಗಂಟೆಯಾದರೂ ಮಾಲಾರ್ಪಣೆ ಮಾಡದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಜಿಲ್ಲಾಡಳಿತ ಅವಮಾನ ಮಾಡಿದೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಮಾಲಾರ್ಪಣೆ ಮಾಡಿದರೇ ತಪ್ಪೇನು? ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಅವರ ಬಗ್ಗೆ ಎಲ್ಲರಿಗೂ ಅಪಾರ ಗೌರವ ಇದೇ ಯಾರೇ ಮಾಲಾರ್ಪಣೆ ಮಾಡಿದರು ಸಂತೋಷ ಸರ್ಕಾರಿ ಕಾರ್ಯಕ್ರಮ ನಿಗಧಿತ ಸಮಯಕ್ಕೆ ಮಾಡಿದರೆ ಎಲ್ಲವೂ ಸರಿಯಾಗಿರುತ್ತದೆ ಒಂದು ಕಡೆ ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡದೆ ಬೇರೆಯವರಿಗೆ ಮಾಲಾರ್ಪಣೆ ಮಾಡಲು ಅವಕಾಶ ನೀಡದೆ ಒಂದು ವೇಳೆ ಮಾಲಾರ್ಪಣೆ ಮಾಡಿದರೆ ದೂರು ದಾಖಲಿಸುವುದಾಗಿ ಧಮ್ಕಿ ಹಾಕಿದ್ದಾರೆ ಯಾರೋ ಬರುವುದಕ್ಕೆ ಕಾದು ಕನಿಷ್ಠ ಮಾಲಾರ್ಪಣೆ ಮಾಡಲು ಅವಕಾಶ ನೀಡದೆ ಜಿಲ್ಲಾಡಳಿತ ಶಿಷ್ಠಾಚಾರ ಉಲಂಘಿಸಿದರಲ್ಲದೆ ಸಂವಿಧಾನ ಶಿಲ್ಪಿಯನ್ನು ಅವಮಾನ ಮಾಡಿದ್ದಾರೆ ಇದು ಖಂಡನೀಯೆಂದರು.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಸರ್ಕಾರದ ಪ್ರತಿನಿಧಿ ಅವರು ಮೊದಲು ಮಾಲಾರ್ಪಣೆ ಮಾಡಿ ನಂತರ ಶಿಷ್ಠಾಚಾರದಂತೆ ಕಾರ್ಯಕ್ರಮವನ್ನು ನಡೆಸಬೇಕಿತ್ತು ಅದು ಮಾಡಿಲ್ಲ ಸಂಘಟನೆಯವರನ್ನು ಮಾಲಾರ್ಪಣೆ ಮಾಡಲು ಬಿಟ್ಟಿಲ್ಲ ಪ್ರತಿಯೊಂದು ರೀತಿಯಲ್ಲಿ ಜನರಿಗೆ ತೊಂದರೆ ನೀಡುವ ಕೆಲಸವನ್ನು ಅಧಿಕಾರಿಗಳಿಂದ ಆಗುತ್ತದೆ ಸಂಘಟನೆಯವರು ಹಾಕಿರುವ ಮಾಲಾರ್ಪಣೆಯನ್ನು ಕಿತ್ತು ಹಾಕಿದ್ದಾರೆ ಎಂದು ದೂರು ಕೇಳಿ ಬಂದಿದೆ ಎಂದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನವನ್ನು ರಚಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿತ್ತು ಆದರೇ ಜಿಲ್ಲಾಡಳಿತ ಕಾಟಾಚಾರಕ್ಕೆ ಕಾರ್ಯಕ್ರಮವನ್ನು ಮಾಡಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಎಸ್.ಸಿ ಘಟಕದ ಅಧ್ಯಕ್ಷ ಶಿವಪ್ಪ, ತಾಪಂ ಮಾಜಿ ಸದಸ್ಯ ವೆಂಕಟೇಶ್, ಅರುಣ್ಕುಮಾರ್, ರಾಜಪ್ಪ, ಕೆಎಂ ಯರ್ರಪ್ಪ, ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.