ಶಿಡ್ಲಘಟ್ಟ,ವಿಶ್ವ ಕನ್ನಡಿಗ ನ್ಯೂಸ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೇವಾಲಯಗಳ ತವರೂರು ಎಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ತಾಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶ್ರೀ ಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ.
ಮುಜರಾಯಿ ಆಡಳಿತಕ್ಕೆ ಒಳಪಟ್ಟು ನೆಲೆಗೊಂಡಿರುವ ಶ್ರೀ ಮಳ್ಳೂರಾಂಭ ದೇವಿಯ ಬ್ರಹ್ಮರಥೋತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಇಂದಿನಿಂದ ದೇವಿಗೆ ಹೋಮ, ಅಭಿಷೇಕ, ಇನ್ನಿತರೆ ಕಾರ್ಯಕ್ರಮಗಳು ಆರಂಭಗೊಂಡಿದೆ ಡಿಸೆಂಬರ್ 08 ರಂದು ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದ ಅಂಗವಾಗಿ ಭಕ್ತಾದಿಗಳಿಂದ ಅನ್ನಸಂತರ್ಪಣೆ ಕಾರ್ಯಕ್ರಮ ರಸ ಸಂಜೆಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಡಿಸೆಂಬರ್ 09 ರಂದು ಉಟ್ಲು ಮಹೋತ್ಸವ, ಮುತ್ತಿನ ಪಲ್ಲಕ್ಕಿ ಮುಂತಾದ ಕಾರ್ಯಕ್ರಮ ನಡೆಯಲಿದ್ದು ತಾಲೂಕು ದಂಡಾಧಿಕಾರಿ ಬಿ.ಎಸ್.ರಾಜೀವ್ ಅವರ ನೇತೃತ್ವದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಟಿ ಬಿ ನಾಗರಾಜ್, ಆರೋಗ್ಯ ಸಚಿವ ಡಾ ಕೆ ಸುಧಾಕರ್, ಸಂಸದ ಎಸ್.ಮುನಿಸ್ವಾಮಿ, ಶಾಸಕ ವಿ ಮುನಿಯಪ್ಪ, ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ದೇವಾಲಯ ಅಭಿವೃದ್ಧಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.