(www.vknews.in)ಅಂಗವಿಕಲರಿಗೆ ನ್ಯಾಯಾಂಗ ಸೇವೆ ಸುಲಭವಾಗಿ ದೊರೆಯುವಂತೆ ಮಾಡುವ ಗುರಿಯೊಂದಿಗೆ – ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸಮಿತಿಯೊಂದನ್ನು ರಚಿಸಿದ್ದಾರೆ.
‘ಸುಪ್ರೀಂ ಕೋರ್ಟ್ ಕಮಿಟಿ ಆನ್ ಆ್ಯಕ್ಸೆಸಿಬಿಲಿಟಿ’ ಹೆಸರಿನ ಈ ಸಮಿತಿಗೆ ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮುಖ್ಯಸ್ಥರಾಗಿರಲಿದ್ದಾರೆ.
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಯ (ಎನ್ಎಲ್ಯು) ಓರ್ವ ಪ್ರಾಧ್ಯಾಪಕ, ಸುಪ್ರೀಂ ಕೋರ್ಟ್ ಉದ್ಯೋಗಿಯಾಗಿರುವ ಅಂಗವಿಕಲ ವ್ಯಕ್ತಿ, ಸುಪ್ರೀಂ ಕೋರ್ಟ್ನ ವಕೀಲರ ಸಂಘ ನಾಮನಿರ್ದೇಶನ ಮಾಡುವ ವಕೀಲ (ಅಂಗವಿಕಲ) ಹಾಗೂ ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡುವ ವ್ಯಕ್ತಿ ಯೊಬ್ಬರು ಸಮಿತಿಯಲ್ಲಿ ಇರಲಿದ್ದಾರೆ. ಸುಪ್ರೀಂ ಕೋರ್ಟ್ನ ರಿಜಿಸ್ಟ್ರಿಯ ಅಧಿಕಾರಿ ಯೊಬ್ಬರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರಲಿದ್ದಾರೆ.
ಸುಪ್ರೀಂ ಕೋರ್ಟಿನ ನಿರ್ಧಾರವನ್ನು ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಸಂಸ್ಥಾಪಕ ಶ್ರೀ ಕೊದಕ್ಕಲ್ ಶಿವಪ್ರಸಾದ್ ಸ್ವಾಗತಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.