ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ನಗರದ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿ ಎದೆನೋವಿನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಬು ಸಲೇಹ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಬು ಸಲೇಹ ಕಳೆದ ಮೂರು ವರ್ಷಗಳ ಹಿಂದೆ ಮಹಿಳೆಯ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದರು.
ಇನ್ನೇನು ಜಾಮೀನು ಲಭ್ಯವಾಗುವುದರಲ್ಲಿದ್ದ ಆರೋಪಿಯ ಕೊಲೆ ಪ್ರಕರಣ ಕೋರ್ಟ್ ನಲ್ಲಿತ್ತು. ಆದರೆ, ಅಷ್ಟರಲ್ಲೇ ಅಬು ಸಲೇಹ ಎದೆ ನೋವಿನಿಂದ ಮೃತಪಟ್ಟಿದ್ದಾರೆ. ಎದೆನೋವು ಕಾಣಿಸಿಕೊಂಡಾಗ ಜೈಲು ವೈದ್ಯರು ತಪಾಸಣೆ ನಡೆಸಿದ ಬಳಿಕ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು.
ನನ್ನ ಪತಿಯವರು ತನಗೆ ಎದೆ ನೋವಿದೆ ಎಂದು ತನ್ನ ವಕೀಲರ ಬಳಿ ಅಳಲು ತೋಡಿಕೊಂಡಿದ್ದರು. ಎದೆ ನೋವು ಎಂದು ಹೇಳಿದರೂ ಕಾರಾಗೃಹದ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ. ಮೃತಪಟ್ಟಿರುವ ಬಗ್ಗೆ ನಮ್ಮ ವಕೀಲರಿಂದ ತಿಳಿದು ಬಂದಿದೆ. ಈ ಬಗ್ಗೆ ಕಾರಾಗೃಹದ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ, ಜೈಲು ಸಿಬ್ಬಂದಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಮೃತ ಅಬು ಸಲೇಹನ ಪತ್ನಿ ಫರ್ಹಾನ್ ಬಾನು ಆರೋಪಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.