ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಾಗೂ ಖಾದಿ ಉತ್ಸವ ಉದ್ಘಾಟನಾ ಸಮಾರಂಭವನ್ನು ಡಿಸೆಂಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್ (ಎಂ.ಟಿ.ಬಿ) ಅವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ತು ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ, ಶಾಸಕರುಗಳಾದ ವಿ.ಮುನಿಯಪ್ಪ, ಎನ್.ಎಚ್.ಶಿವಶಂಕರರೆಡ್ಡಿ, ಎಂ.ಕೃಷ್ಣಾರೆಡ್ಡಿ, ಎಸ್.ಎನ್.ಸುಬ್ಬಾರೆಡ್ಡಿ, ವಿಧಾನ ಪರಿಷತ್ತಿನ ಶಾಸಕರುಗಳಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್, ಕರ್ನಾಟಕ ರಾಜ್ಯ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಡಿ.ಎಸ್.ಆನಂದರೆಡ್ಡಿ (ಬಾಬು), ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯಕದರ್ಶಿ ಪಂಕಜ್ ಕುಮಾರ್ ಪಾಂಡೆ, ಸರ್ಕಾರದ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಆರ್ಥಿಕ ಇಲಾಖೆ ಮತ್ತು ಆಡಳಿತಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಏಕ್ ರೂಪ್ ಕೌರ್, ಸೂಕ್ಷ್ಮ, ಸಣ್ಣ ಮತ್ತು ಮದ್ಯಮ ಕೈಗಾರಿಕೆಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕಿ ಸಿ.ಸತ್ಯಭಾಮ, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಖಾದಿ ಆಯೋಗದ ರಾಜ್ಯ ನಿರ್ದೇಶಕರಾದ ಡಾ|| ಇ.ಮೋಹನ್ ರಾವ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ವಿರಭದ್ರಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹೆಚ್.ಎಸ್. ಆನಂದ್, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಡಿ. ರಾಘವೇಂದ್ರ, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
17-12-2022 ರಿಂದ 25-12-2022 ವರೆಗೆ ಖಾದಿ ಉತ್ಸವ ನಡೆಯಲಿದೆ ಈ ಉತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪರಂಪರಗತ, ಪರಿಸರ ಶೈಲಿಯ, ಸರಳ ಖಾದಿ ಉಡುಪುಗಳೊಂದಿಗೆ ಆಧುನಿಕತೆಯ ಮರಗಳನ್ನು ಹೊಂದಿದ ಆರಳೆ ಖಾದಿ, ಪಾಲಿವಸ್ತ್ರ ಖಾದಿ, ಉಣ್ಣೆಖಾದಿ ಹಾಗೂ ರೇಷ್ಮೆ ಖಾದಿ ಉಡುಪುಗಳು, ಶುಚಿ-ರುಚಿಯಾದ ಉಪ್ಪಿನಕಾಯಿ, ಹಣ್ಣಿನ ರಸ, ಮಸಾಲ ಪುಡಿ, ಚಟ್ನಿಯ ಪುಡಿ, ಹಪ್ಪಳ, ಸಂಡಿಗೆ, ಶ್ಯಾವಿಗೆ ಇತ್ಯಾದಿ ಖಾದ್ಯ ವಸ್ತುಗಳು,
ಆಗ್ಮಾರ್ಕ್ ಜೇನುತುಪ್ಪ, ಗೋಡಂಬಿ, ಹನಿಜಾಮ, ಕೋಕಂ ಜೂಸ್, ಹೆಣ್ಣಿನ ತಂಪು ಪಾನಿಯಗಳು, ಸುವಾಸಿತ ಅಗರಬತ್ತಿ, ಸುವಾಸಿತ ಎಣ್ಣೆ, ಕುಟೀರ ಬ್ಯಾಂಡ್ ಸ್ನಾನದ ಸಾಬೂನುಗಳು, ಶುದ್ಧ ಬೇವಿನ ಎಣ್ಣೆ, ಗಂಧದ ಎಣ್ಣೆ ಹಾಗೂ ಆಯುರ್ವೇದಿಕ್ ಹಲ್ಲು ಪುಡಿ, ಆಯುರ್ವೇದ ಔಷಧಿಗಳು, ಉತ್ತಮ ಗುಣಮಟ್ಟದ ಶೂ, ಚಪ್ಪಲಿಗಳು, ಕಲಾಕೃತ ಕೋಲ್ವಾಪುರಿ ಚಪ್ಪಲಿಗಳು ಹಾಗೂ ಕಾನ್ಪೂರ್ ಗ್ರಾಮೋದ್ಯೋಗ ಪಾದರಕ್ಷೆ, ಪ್ರಸಿದ್ದಿ ಪಡೆದ ಕರ್ನಾಟಕ ಚನ್ನಪಟ್ಟಣದ ವೈವಿಧ್ಯಮಯ ಆಟಿಕೆ ಸಾಮಾನುಗಳು, ದಿನನಿತ್ಯದ ಗೃಹ ಬಳಕೆಯ ಸಕಲ ಸಾಮಾಗ್ರಿಗಳು ಒಂದೆ ಆವರಣದಲ್ಲಿ ಲಭ್ಯವಾಗಲಿದೆ.
ಅರಳೆ ಖಾದಿ 35%, ಪಾಲಿವಸ್ತ್ರ 3%, ಉಣ್ಣೆ 35%, ಸಿಲ್ಕ್ 20% ವಿಶೇಷ ರಿಯಾಯಿತಿ ನೀಡಲಾಗುತ್ತದೆ ಜಿಲ್ಲೆಯ ಜನರು ಖಾದಿ ಉತ್ಸವದಲ್ಲಿ ಭಾಗವಹಿಸಿ ಖಾದಿ ವಸ್ತುಗಳು ಮತ್ತು ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕೆಂದು ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಕೆ.ವಿ.ನಾಗರಾಜ್ ಮನವಿ ಮಾಡಿದ್ದಾರೆ.
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.