ಮಂಡ್ಯ (ವಿಶ್ವ ಕನ್ನಡಿಗ ನ್ಯೂಸ್) : ಮಂಡ್ಯ ಜಿಲ್ಲೆಯ ಸಂಜಯ ವೃತ್ತದಲ್ಲಿ ನಡೆದ ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿ ದೇಶದ್ರೋಹದ ಕೃತ್ಯ ಎಸಗಿದ ಘಟನೆ ನಡೆದಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಬುಟ್ಟೋ ಪ್ರಧಾನಿ ಮೋದಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ವಿರುದ್ಧ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ಮೊದಲು ಭಾರತದ ಪರ ಘೋಷಣೆ ಕೂಗಿದ್ದಾರೆ. ಇದರ ನಡುವೆ ಬಿಜೆಪಿಯ ಇಬ್ಬರು ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಎಂದು ಎರಡೆರಡು ಬಾರಿ ಘೋಷಣೆ ಕೂಗಿದ್ದು, ಘಟನೆಯ ವೀಡಿಯೋ ವೈರಲಾಗಿದೆ. ಪಾಕಿಸ್ತಾನದ ಪರ ಘೋಷಣೆ ಕೂಗುವಾಗ ಅಕ್ಕಪಕ್ಕದಲ್ಲಿರುವವರು ಬಾಯಿ ಮುಚ್ಚಿಸುವ ದೃಶ್ಯವೂ ವೀಡಿಯೋದಲ್ಲಿ ಕಾಣಿಸುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.