ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಪಂಚಾಯತ್ ಚುನಾವಣೆಯಲ್ಲಿ ಸೋತ ನಂತರ ಗ್ರಾಮದ ಜನರ ಮೇಲೆ ಹಲ್ಲೆಗೆ ಯತ್ನಿಸಿದ ಅಭ್ಯರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ. 45 ವರ್ಷದ ಅಭ್ಯರ್ಥಿ ಗ್ರಾಮಸ್ಥರಿಗೆ ಕತ್ತಿ ತೋರಿಸಿ ಬೆದರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಪಾತೂರ್ ತಾಲೂಕಿನ ಖಮಖೇಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ನಡೆದ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಆರೋಪಿಯು ಗ್ರಾಮ ಪಂಚಾಯಿತಿ ಸದಸ್ಯನಾಗಲು ಚುನಾವಣೆಗೆ ಸ್ಪರ್ಧಿಸಿದ್ದು, ಆಯ್ಕೆಯಾಗದಿದ್ದಕ್ಕೆ ಬೇಸರಗೊಂಡು ಕತ್ತಿ ಝಳಪಿಸಿ ಗ್ರಾಮಸ್ಥರನ್ನು ಬೆದರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 30 ವರ್ಷಗಳಿಂದ ಅವರ ಕುಟುಂಬದ ಸದಸ್ಯರು ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿದ್ದರು, ಆದರೆ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು ಅವರನ್ನು ಕೆರಳಿಸಿತು ಎಂದು ಪೊಲೀಸರು ಮಾಹಿತಿ ನೀಡಿದರು. ಹಿಂಸಾಚಾರದ ನಂತರ 45 ವರ್ಷದ ಆರೋಪಿ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.