ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ಹಿಂದೂಗಳ ಮೇಲೆ ಹಲ್ಲೆ ಮಾಡಲು ಬರುವವರನ್ನು ಎದುರಿಸುವ ಹಕ್ಕು ನಮಗಿದ್ದು, ಮುಸ್ಲಿಮರ ದಾಳಿಯಿಂದ ರಕ್ಷಿಸಿಕೊಳ್ಳಲು ಹಿಂದೂ ಸಮುದಾಯದವರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು, ಮನೆಯಲ್ಲಿ ತರಕಾರಿ ಕೊಯ್ಯುವ ಚಾಕು ಕೂಡ ಹರಿತವಾಗಿ ಇಡಬೇಕು ಎಂದು ಸಂಸದೆ ಹಾಗೂ ಬಿಜೆಪಿ ನಾಯಕಿ ಪ್ರಜ್ಞಾಸಿಂಗ್ ಠಾಕೂರ್ ಕರೆ ನೀಡಿದರು.
ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಮ್ಮೇಳನದಲ್ಲಿ ಮಾತನಾಡಿದ ಅವರು, ಅಂತಹ ಪರಿಸ್ಥಿತಿಯನ್ನು ನೀವು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುವುದಿಲ್ಲ. ಪ್ರತಿಯೊಬ್ಬರಿಗೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹಕ್ಕಿದೆ. ಯಾರಾದರೂ ನಿಮ್ಮ ಮನೆಗಳಿಗೆ ನುಗ್ಗಿ ದಾಳಿ ಮಾಡಲು ಧೈರ್ಯ ಮಾಡಿದರೆ, ನಿಮ್ಮನ್ನು ರಕ್ಷಿಸಿಕೊಳ್ಳುವುದು ಅವಶ್ಯಕ. ಹಿಂದೂಗಳ ಮೇಲಿನ ದಾಳಿಗಳ ವಿರುದ್ಧ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹಕ್ಕಿದೆ ಎಂದು ಬಿಜೆಪಿ ನಾಯಕಿ ಹೇಳಿದ್ದಾರೆ.
ಮುಸ್ಲಿಮರಿಗೆ ಜಿಹಾದ್ ಪರಂಪರೆ ಇದೆ, ಏನೂ ಮಾಡದಿದ್ದರೂ ಲವ್ ಜಿಹಾದ್ ನಡೆಸುತ್ತಾರೆ. ಪ್ರೀತಿಸಿದರೂ ಅದರ ಮೇಲೆ ಜಿಹಾದ್ ಮಾಡುತ್ತಾರೆ. ನಿಮ್ಮ ಹುಡುಗಿಯರನ್ನು ರಕ್ಷಿಸಿ ಮತ್ತು ಅವರಿಗೆ ಸರಿಯಾದ ಮೌಲ್ಯಗಳನ್ನು ಕಲಿಸಿ. ಲವ್ ಜಿಹಾದ್ ನಡೆಸುತ್ತಿರುವವರಿಗೆ ಅದೇ ನಾಣ್ಯದಲ್ಲಿ ಪ್ರತ್ಯುತ್ತರ ನೀಡಬೇಕು ಎಂದು ಭೋಪಾಲ್ ಸಂಸದೆ ಪ್ರಜ್ಞಾ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.