ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮಹತ್ತರವಾದ ರಾಜಕೀಯ ಬದಲಾವಣೆಯಾಗಲಿದೆ ಎಂದು ಮಾನವ ಹಕ್ಕುಗಳ ಸಾಂಸ್ಕೃತಿಕ ಸಂಘದ ಗೌರವ ಅಧ್ಯಕ್ಷ ಶಿಡ್ಲಘಟ್ಟ ಕ್ಷೇತ್ರದ ಸ್ಪರ್ಧಾ ಆಕಾಂಕ್ಷಿ ಸಂದೀಪ್ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸಾರಿಗೆ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣದ ಸರ್ಕಲ್ ವರೆಗೆ ಪಾದಯಾತ್ರೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.
ನಮ್ಮ ತಾತ ಮಾಜಿ ಶಾಸಕ ಎಸ್ ಮುನಿಶಾಮಪ್ಪ ಅವರ ಭಾವಚಿತ್ರವನ್ನು ಹಾಕಿಕೊಂಡಿರುವುದಕ್ಕೆ ನನ್ನ ಮೇಲೆ ದೂರು ದಾಖಲಿಸಿದ್ದಾರೆ ಸಂತೋಷ ಕಳೆದ ಹತ್ತು ವರ್ಷಗಳಿಂದ ಅವರ ಫೋಟೋ ಎಲ್ಲಿಯೂ ಕಾಣಿಸಿಕೊಳ್ಳುತ್ತಿರಲಿಲ್ಲ ನಾನು ಮತ್ತು ಮಾಜಿ ಶಾಸಕ ರಾಜಣ್ಣ ಅವರು ಸಂಬಂಧಿಗಳೇ, ಆದ್ರೂ ಸಹ ನನ್ನ ಮೇಲೆ ಯಾವ ಉದ್ದೇಶಕ್ಕಾಗಿ ದೂರ ನೀಡಿದ್ದಾರೆ ಎಂಬುದು ಅರ್ಥವಾಗಿಲ್ಲ ನಮ್ಮ ತಾತನ ವಿಚಾರಗಳನ್ನು ಮುಂದಿಟ್ಟುಕೊಂಡು ಕ್ಷೇತ್ರದ ಯುವಕರಿಗೆ ಮತ್ತು ಜನರಿಗೆ ತನ್ನಿಂದ ಆಗುವ ಸೌಲಭ್ಯಗಳನ್ನು ಒದಗಿಸುವುದೇ ನನ್ನ ಮುಖ್ಯ ಗುರಿ ಮುಂದಿನ 2023ರ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಸ್ಪಷ್ಟಪಡಿಸಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಎಂಟ್ರಿ ಪಡೆದಿರುವ ರಾಮಚಂದ್ರಗೌಡ ಅವರು ಮಾಜಿ ಸಚಿವ ಜಿಟಿ ದೇವೇಗೌಡ ಅವರ ಮೂಲಕ ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆಯಲಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.
ಜಿಲ್ಲೆಯ ಚಿಂತಾಮಣಿ ಮತ್ತು ಚಿಕ್ಕಬಳ್ಳಾಪುರಕ್ಕೆ ಹೋಲಿಸಿದರೆ ಕಳೆದ ಹತ್ತು ವರ್ಷಗಳ ಮೊದಲು ಶಿಡ್ಲಘಟ್ಟ ತಾಲೂಕು ಅಭಿವೃದ್ಧಿ ಆಗುತ್ತಿತ್ತು ಆದರೆ ಈಗ ಅಭಿವೃದ್ಧಿ ಮರಿಚಿಕೆಯಾಗಿದೆ ಎಂದು ದೂರಿದ ಅವರು ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಶಾಸಕರು ಎಷ್ಟು ಅನುದಾನವನ್ನು ತಂದಿದ್ದಾರೆ ಎಂಬುದನ್ನು ಸಾರ್ವಜನಿಕರ ಮುಂದೆ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.
ಕ್ಷೇತ್ರದ ಜನರು ಜನಸೇವೆ ಮಾಡುವರನ್ನು ಆಶೀರ್ವಾದ ಮಾಡುತ್ತಾ ಬಂದಿದ್ದಾರೆ ಮುಂದೆಯೂ ಮಾಡುತ್ತಾರೆಂಬ ಆಶಾಭಾವನೆ ಎಂದು ಹೊಂದಿದ್ದೇನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಒಂದು ರೂಪಾಯಿ ಖರ್ಚು ಮಾಡದೆ ಮತಯಾಚಿಸುತ್ತೇನೆ ಎಂದರು.
ವರದಿ ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.