(www.vknews.in) ಇರಾ ಗ್ರಾಮದ ಮಹಿಳಾ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಗ್ನೇಸ್ ಡಿಸೋಜ ಮತ್ತು ಮಕ್ಕಳ ಗ್ರಾಮಸಭೆಯು ಸೈಪುದ್ದೀನ್ ಅಧ್ಯಕ್ಷತೆಯಲ್ಲಿ ತಾಳಿತ್ತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ನೊಡೆಲ್ ಅಧಿಕಾರಿಯಾಗಿ ಶ್ರೀಮತಿ ಶಾರದ ಮೇಲ್ವಿಚಾರಕಿ ಇವರು ಮಕ್ಕಳಿಗೆ ಶಿಕ್ಷಣದ ಪ್ರಾಮುಖ್ಯತೆ ಹಾಗೂ ಮೋಬೈಲ್ ಉಪಯೋಗದ ಒಳಿತು- ಕೆಡುಕಿನ ಬಗ್ಗೆ ಕಿವಿಮಾತುಗಳನ್ನಾಡಿದರು. ಹಾಗೆಯೇ ಮಹಿಳೆಯರಿಗೆ ಆರೋಗ್ಯದ ಬಗ್ಗೆ ತಿಳಿ ಹೇಳಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಮಂಚಿ ಇಲ್ಲಿಯ ಆರೋಗ್ಯ ಸಹಾಯಕಿ ಶ್ರೀಮತಿ ಅಮಿತ ರವರು ಮೆದುಳು ಜ್ವರ ತಡೆಗಟ್ಟಲು ಸರಕಾರದಿಂದ ಕೊಡುತ್ತಿರುವ ಚುಚ್ಚುಮದ್ದಿನ ಬಗ್ಗೆ ಹಾಗೂ ಆರೋಗ್ಯದ ಬಗ್ಗೆ ತಿಳಿಸಿದರು. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀಮತಿ ಭಾರತಿ ಇವರು ಸಮಾಜದಲ್ಲಿ ಮಹಿಳಾ ಹಾಗೂ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ಮತ್ತು ಇಂತಹ ಸಂದರ್ಭದಲ್ಲಿ ತಾವು ಹೇಗೆ ರಕ್ಷಣೆ ಪಡೆಯಬೇಕು ಎಂದು ತಿಳಿಸಿದರು. ಸಾಂತ್ವಾನ ಕೇಂದ್ರದ ಕಾರ್ಯಕರ್ತೆ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ , ಅದರಿಂದ ಪಾರಾಗುವ ಬಗ್ಗೆ ಹಾಗೂ ಸೋಕ್ಷ್ಮ ವಿಷಯಯಗಳ ಬಗ್ಗೆ ವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮೊಯಿದಿನ್ ಕುಂಞಿ, ಸದಸ್ಯರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಕೆ.ಟಿ.ಸುಧಾಕರ, ಶ್ರೀಮತಿ ನಿರ್ಮಲ, ಶ್ರೀಮತಿ ರೇಣುಕಾ, ಶ್ರೀಮತಿ ಚಂದ್ರಪ್ರಭಾ, ಶ್ರೀಮತಿ ವಾಣಿಶ್ರೀ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಹಬೀಬ್ ರೆಹಮಾನ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸೋನಿತ ತಾಳಿತ್ತಬೆಟ್ಡು , ಶ್ರೀಮತಿ ಸವಿತ ಬಾಳೆಪುಣಿ, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಎಂಬಿಕೆ ಶ್ರೀಮತಿ ಸುಜಾತ, ಶ್ರೀಮತಿ ನಳಿನಾಕ್ಷಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯದರ್ಶಿ ದಿನೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.