ಸುರತ್ಕಲ್ (ವಿಶ್ವ ಕನ್ನಡಿಗ ನ್ಯೂಸ್) : ಮಂಗಳೂರಿನ ಎಂ ಆರ್ ಪಿ ಯಲ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೊಹಮ್ಮದ್ ಹಸೀಮ್ (17) ಮೃತಪಟ್ಟ ಬಾಲಕ.
ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಅಬ್ದುಲ್ ರೆಹಮಾನ್ ದಂಪತಿಯ ಮೂವರು ಪುತ್ರರಲ್ಲಿ ಎರಡನೆಯವನಾದ ಹಸೀಮ್ ಸೋಮವಾರ ಬೆಳಗ್ಗೆ ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ವೇಳೆ ತಲೆ ತಿರುಗಿ ಬಿದ್ದಿದ್ದು, ಮನೆಮಂದಿ ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.