ಕೊಲ್ಕತ್ತಾ (ವಿಶ್ವ ಕನ್ನಡಿಗ ನ್ಯೂಸ್) : ಪ್ರಧಾನಿ ನರೇಂದ್ರ ಮೋದಿ ಸ್ವಾಮಿ ವಿವೇಕಾನಂದರ ಪುನರ್ಜನ್ಮಎಂದು ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಹೇಳಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಸೌಮಿತ್ರ ಖಾನ್ ಅವರು ಸುದ್ದಿಗಾರರೊಂದಿಗೆ ಈ ಮಾತು ಹೇಳಿದರು.
ಸ್ವಾಮೀಜಿ ಹೊಸ ರೂಪದಲ್ಲಿ ಮತ್ತೆ ಹುಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ. ನಮಗೆ ಸ್ವಾಮೀಜಿ ದೇವರಿದ್ದಂತೆ. “ಮೋದಿ ಅವರು ತಮ್ಮ ತಾಯಿಯನ್ನು ಕಳೆದುಕೊಂಡ ನಂತರವೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಮೋದಿ ಆಧುನಿಕ ಭಾರತದ ನವಯುಗದ ಸ್ವಾಮೀಜಿ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು.
ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ ಸೌಮಿತ್ರ ಖಾನ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ಖಾನ್ ಅವರ ಹೇಳಿಕೆ ಸ್ವಾಮಿ ವಿವೇಕಾನಂದ ಮತ್ತು ಅವರ ಸಿದ್ಧಾಂತಕ್ಕೆ ಮಾಡಿದ ಅವಮಾನ ಎಂದು ಕೋಲ್ಕತಾ ಮೇಯರ್ ಮತ್ತು ಕ್ಯಾಬಿನೆಟ್ ಸದಸ್ಯ ಫರ್ಹಾದ್ ಹಕೀಮ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.