ಮೈಸೂರು (ವಿಶ್ವ ಕನ್ನಡಿಗ ನ್ಯೂಸ್) : ಮುಸ್ಲಿಂಮರ ಜೊತೆ ಭ್ರಾತೃತ್ವ ಇರಲಿ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ, ಚುನಾವಣೆ ಹಿನ್ನೆಲೆಯಲ್ಲಿ ಇದು ಮೋದಿಯವರ ಮೊಸಳೆ ಕಣ್ಣೀರಿನಂತಿದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆ ಅಹಿಂಸೆ ಮತ್ತು ಹಿಂಸೆಯ ನಡುವಿನ ಚುನಾವಣೆ. ಅಹಿಂಸೆ ಸಾರಿದ ಗಾಂಧಿ ಬೇಕಾ ಅವರನ್ನು ಕೊಂದ ಗೋಡ್ಸೆ ಬೇಕಾ ನಿರ್ಧರಿಸುವ ಚುನಾವಣೆ ಎಂದು ಹೇಳಿದರು. ಬಿಜೆಪಿ ಅಧ್ಯಕ್ಷರು ಈಗಾಗಲೇ ಹೇಳಿದ್ದಾರೆ ರಸ್ತೆ ಅಭಿವೃದ್ಧಿ ವಿಚಾರ ಬೇಕಿಲ್ಲ ಏನಿದ್ದರೂ ಲವ್ ಜಿಹಾದ್ ಧರ್ಮದ ವಿಚಾರದ ಚುನಾವಣೆ ಅಂತ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.